Home / ಲೇಖನ / ಇತರೆ / ವಚನ ವಿಚಾರ – ನೀನು ನಾನು

ವಚನ ವಿಚಾರ – ನೀನು ನಾನು

ಅಯ್ಯಾ
ನಿನ್ನ ಮುಟ್ಟಿ ಮುಟ್ಟದೆನ್ನ ಮನ
ನೋಡಾ
ಬಿಚ್ಚಿ ಬೀಸರವಾಯಿತ್ತೆನ್ನ ಮನ
ಹೊಳಲ ಸುಂಗಿಕಗನಂತೆ ಹೊದಕುಳಿಗೊಂಡಿತ್ತೆನ್ನ ಮನ
ಎರಡೆಂಬುದ ಮರೆದು ಬರಡಾಗದೆನ್ನ ಮನ
ನೀನು ಆನಪ್ಪ ಪರಿಯೆಂತು ಹೇಳಾ ಚೆನ್ನಮಲ್ಲಿಕಾರ್ಜುನಾ

[ಬೀಸರ-ವ್ಯರ್ಥ, ಹೊಳಲ ಸುಂಕಿಗ-ನಗರದಲ್ಲಿರುವ ಸುಂಕ ಕೊಡುವಾತ, ಹೊದಕುಳಿಗೊಂಡಿತ್ತು-ಸಂಕಟಪಟ್ಟಿತ್ತು, ಆನಪ್ಪ-ನಾನಾಗುವ]

ಅಕ್ಕಮಹಾದೇವಿಯ ವಚನ.

ನಾನು-ನೀನುಗಳ ವ್ಯತ್ಯಾಸವನ್ನು ಕುರಿತ ವಚನ ಇದು. ನಾವು ಸಾಮಾನ್ಯವಾಗಿ ಬಳಸುವ ಮಾತಿನ ಕ್ರಮವನ್ನು, ಆದ್ದರಿಂದಲೇ ಗ್ರಹಿಕೆಯ ಕ್ರಮವನ್ನೂ ಅಕ್ಕ ಇಲ್ಲಿ ತಲೆಕೆಳಗುಮಾಡಿದ್ದಾಳೆ.

ನೋಡು, ನನ್ನ ಮನಸ್ಸು ನಿನ್ನನ್ನು ಮುಟ್ಟುತ್ತಿದೆ, ಆದರೆ ಮುಟ್ಟುತ್ತಿಲ್ಲ! ನಿನ್ನನ್ನು ತಲುಪಿದೆ. ಆದರೆ ‘ಮುಟ್ಟಿಲ್ಲ’. ಮನಸ್ಸು ಬಿಚ್ಚಿಕೊಂಡು, ಕಳಚಿಕೊಂಡು ದಂಡವಾಗಿಬಿಟ್ಟಿದೆ (ಬೀಸರ).

ಮುಟ್ಟು ಅನ್ನುವ ಮಾತಿಗೆ ತಲುಪು ಮತ್ತು ಸ್ಪರ್ಶಿಸು ಅನ್ನುವ ಅರ್ಥ ಇರುವ ಹಾಗೆಯೇ ಬಿಚ್ಚಿಕೊಂಡು ಅಂದರೆ ತೆರೆದುಕೊಂಡು, ಕಳಚಿಕೊಂಡು ಅನ್ನುವ ಎರಡೂ ಅರ್ಥಗಳು ಹೊಳೆಯುತ್ತವೆ.

ಸುಂಕ ತೆರಬೇಕಾದ ನಗರದ ಮನುಷ್ಯನ ಹಾಗೆ ನನ್ನ ಮನಸ್ಸು ಸಂಕಟಪಡುತ್ತಿದೆ. ಕೊಡಬೇಕಾದ್ದನ್ನು ಕೊಡಲೊಲ್ಲದೆ, ನನಗೇ ಬೇಕು ಎಂದು ಹಂಬಲಿಸಿ ಚಡಪಡಿಸುತ್ತಾನಲ್ಲ ತೆರಿಗೆದಾರ ಹಾಗೆ.

ಕೊಡಬೇಕಾದದ್ದು, ಉಳಿಸಿಕೊಳ್ಳಬೇಕಾದದ್ದು-ನನ್ನ ಮನಸ್ಸು ದ್ವಂದ್ವವನ್ನು ಮರೆತಿಲ್ಲ, ಆದ್ದರಿಂದ ಮನಸ್ಸು ಬರಡಾಗುವುದಿಲ್ಲ. ಒಂದೇ ಆಗಲು ಸಾಧ್ಯವೇ ಇಲ್ಲವಾಗಿದೆ. ನೀನು ನಾನಾಗುವ ರೀತಿ ಹೇಗೆ ಹೇಳು?

ಮನಸ್ಸು ಬರಡಾದರೆ, ಇತರ ಕಲ್ಪನೆ, ಭ್ರಮೆಗಳನ್ನು ಹೆರದೆ ಬಂಜೆಯಾದರೆ ಮಾತ್ರವೇ ಅಲ್ಲಿ ಚೆನ್ನಮಲ್ಲಿಕಾರ್ಜುನನಿಗೆ ಜಾಗ. ಆದರೆ ಮನಸ್ಸೇ ದಂಡವಾಗಿ ಹೋಗುತ್ತಿದೆ. ಮನಸ್ಸು ಸುಂಕದವನ ಹಾಗೆ, ಅತ್ತ ರಾಜನ ಕಡೆಯವನು ಇತ್ತ ಜನರ ದುಃಖ ಅರಿತರೂ ಏನೂ ಮಾಡಲಾಗದವನು, ಇಡೀ ನಾನುತನವೇ ಚನ್ನಮಲ್ಲಿಕಾರ್ಜುನನಿಗೆ ಕೊಡಬೇಕಾದ ಸುಂಕ, ಅದನ್ನು ಕೊಡಲೊಲ್ಲದೆ ಸಂಕಟಪಡುತ್ತಿರುವ ಮನಸ್ಸು ಬಂಜೆಯಾಗದು. ಲೋಕದ ವ್ಯವಹಾರವಾದ ಸುಂಕದ ಸುಖ ದುಃಖಗಳಲ್ಲಿ ಮನಸ್ಸು ಸಿಲುಕಿದೆ ಅನ್ನುತ್ತಿದ್ದಾಳೋ ಅಕ್ಕ?

ನಾನು ನಿನ್ನಂತೆ ಆಗಬೇಕು ಅನ್ನುವುದಿಲ್ಲ ಅಕ್ಕ. ಅದಕ್ಕೆ ಬದಲಾಗಿ ನೀನು ನನ್ನಂತೆ ಆಗುವುದು ಸಾಧ್ಯವೇ ಎನ್ನುತ್ತಿದ್ದಾಳೆ. ಒಡಲಿಲ್ಲದ, ಸುಖ ದುಃಖವಿಲ್ಲದ, ಮನಸ್ಸಿನಲ್ಲಿ ಸೀಳು ಬಿರುಕುಗಳಿಲ್ಲದ, (ಕ್ಷಣಕ್ಕೊಂದು ಬಗೆಯಾಗುವ) ಮನಸ್ಸೇ ಇಲ್ಲದ ಚೆನ್ನಮಲ್ಲಿಕಾರ್ಜುನ ನನ್ನಂತೆ ದೇಹ, ಮನಸ್ಸು ಇರುವವನಾಗುವುದು ಅಸಾಧ್ಯ, ಅದು ಅಸಾಧ್ಯವಾದ್ದರಿಂದಲೆ ಅವನು ತನಗೆ ದಕ್ಕಲಾರ. ಅವನು ನನ್ನಂತೆ ಆಗಬೇಕು. ಅಥವಾ ನನ್ನ ಮನಸಿನ ಸುಂಕ ತೆತ್ತರೆ ಸಾಧ್ಯ.

ತನಗೂ ತನ್ನ ಪ್ರಿಯಕರ ದೈವಕ್ಕೂ ಇರುವ ವ್ಯತ್ಯಾಸವೇ ಅಕ್ಕನ ಅಳಲಿಗೆ ಕಾರಣವೇನೋ. ಪ್ರಿಯದೈವವನ್ನೂ ತನ್ನಂತೆ ಆಗು ಎಂದು ಎಸೆಯುವ ಸವಾಲೋ ಇದು? ಅಥವಾ ಸಂಬಂಧ ಸಾಧ್ಯವಾಗಬೇಕಾದರೆ ಇಬ್ಬರಿಗೂ ಇರುವ ಜವಾಬ್ದಾರಿಯನ್ನು ನೆನಪಿಸುವ ಮಾತೋ? ಯೋಚಿಸಿದಷ್ಟೂ ಮನಸ್ಸನ್ನು ಕದಲಿಸಿ ಅರ್ಥದ ಅಲೆಗಳನ್ನು ಎಬ್ಬಿಸುವ ವಚನ ಇದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...