Home / ಲೇಖನ / ಇತರೆ / ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ಅಯ್ಯಾ
ನೀನೆನ್ನ ಮೊರೆಯನಾಲಿಸಿದಡಾಲಿಸು
ಆಲಿಸದಿರ್ದಡೆ ಮಾಣು
ಅಯ್ಯಾ
ನೀನೆನ್ನ ದುಃಖವ ನೋಡಿದಡೆ ನೋಡು
ನೋಡದಿರ್ದಡೆ ಮಾಣು
ನಿನಗಿದು ವಿಧಿಯೆ
ನೀನೊಲ್ಲದೊಡೆ ಆನೊಲಿಸುವ ಪರಿಯೆಂತಯ್ಯಾ

[ಆಲಿಸದಿರ್ದಡೆ ಕೇಳದಿದ್ದರೆ ಮಾಣು-ಬಿಡು,]

ಅಕ್ಕಮಹಾದೇವಿಯ ವಚನ. ಈ ವಚನದಲ್ಲಿ ‘ಎನಗಿದು ವಿಧಿಯೇ’ ಎಂದೇನಾದರೂ ಇದ್ದಿದ್ದರೆ ಅರ್ಥದ ತೊಡಕು ಏನೂ ಉಂಟಾಗುತ್ತಿರಲಿಲ್ಲ. ಅಥವಾ ನಾನು ನೋಡಿದ ಪುಸ್ತಕದಲ್ಲಿ ಅಚ್ಚಿನ ದೋಷವಿದೆಯೋ ಗೊತ್ತಿಲ್ಲ. ಆದರೆ ಹೀಗಿರುವುದರಿಂದ ಮಾತ್ರ ಈ ವಚನ ಹಲವು ಪ್ರಶ್ನೆಗಳನ್ನು ಎತ್ತುವಂತೆ ತೋರುತ್ತದೆ. ನನ್ನ ಮೊರೆಯನ್ನು ಕೇಳಬೇಕೆನಿಸಿದರೆ ಕೇಳು, ಇಲ್ಲದಿದ್ದರೆ ಬಿಡು; ನೀನು ನನ್ನನ್ನು ನೋಡಬೇಕೆನಿಸಿದರೆ ನೋಡು, ಇಲ್ಲದಿದ್ದರೆ ಬಿಡು. ಹೀಗಿರುವುದು ನಿನ್ನ ವಿಧಿಯೋ? ನೀನು ನನ್ನ ಒಲಿಯದಿದ್ದರೆ ನಾನು ನಿನ್ನನ್ನು ಒಲಿಸುವ ಪರಿ ಹೇಗೆ ಎಂದು ಅಕ್ಕ ಕೇಳುತ್ತಾಳೆ.

ದೇವರು ನಿರ್ಗುಣ ಅನ್ನುತ್ತಾರಲ್ಲವೆ, ಹಾಗಿರಬೇಕಾದದ್ದು ಅವನ ಹಣೆಯಬರಹ. ದೇವರು ಯಾರನ್ನೂ ದ್ವೇಷಿಸಲೂ ಆರ, ಪ್ರೀತಿಸಲೂ ಆರ. ಹೀಗಿರುವುದು ಅವನ ವಿಧಿಯೇ ಆದರೆ ತಾನು ದೇವರನ್ನು ಎಷ್ಟು ಪ್ರೀತಿಸಿದರೆ ಏನು ಬಂದ ಹಾಗಾಯಿತು? ಅವನಲ್ಲಿ ನನ್ನ ಬಗ್ಗೆ ಪ್ರೀತಿ ಹುಟ್ಟದಿದ್ದರೆ ಏನು ತಾನೇ ಮಾಡಬಲ್ಲೆ ಎಂಬ ದಿಕ್ಕುಗಾಣದ ಕಳವಳ ಈ ವಚನದಲ್ಲಿರುವಂತಿದೆ.

ಇದೇ ಸ್ವರೂಪದ ಇನ್ನೊಂದು ದೀರ್ಘವಾದ ವಚನವೂ ಇದೆ. ಅದರಲ್ಲಿ ನೀನು ಏನು ಮಾಡಿದರೂ ನಾನು ಮಾತ್ರ ನಿನ್ನನ್ನು ಪ್ರೀತಿಸದೆ ಇರಲಾರೆ ಅನ್ನುವ ನಿಲುವು ಕಾಣುತ್ತದೆ. ಮನೋಭಾವಗಳ ಸೂಕ್ಷ್ಮವನ್ನು ಅಕ್ಕನ ಹಾಗೆ ಮಾತಿನಲ್ಲಿ ಹಿಡಿದಿಟ್ಟವರು ಕಡಮೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...