Home / ಲೇಖನ / ಇತರೆ / ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ಅಯ್ಯಾ
ನೀನೆನ್ನ ಮೊರೆಯನಾಲಿಸಿದಡಾಲಿಸು
ಆಲಿಸದಿರ್ದಡೆ ಮಾಣು
ಅಯ್ಯಾ
ನೀನೆನ್ನ ದುಃಖವ ನೋಡಿದಡೆ ನೋಡು
ನೋಡದಿರ್ದಡೆ ಮಾಣು
ನಿನಗಿದು ವಿಧಿಯೆ
ನೀನೊಲ್ಲದೊಡೆ ಆನೊಲಿಸುವ ಪರಿಯೆಂತಯ್ಯಾ

[ಆಲಿಸದಿರ್ದಡೆ ಕೇಳದಿದ್ದರೆ ಮಾಣು-ಬಿಡು,]

ಅಕ್ಕಮಹಾದೇವಿಯ ವಚನ. ಈ ವಚನದಲ್ಲಿ ‘ಎನಗಿದು ವಿಧಿಯೇ’ ಎಂದೇನಾದರೂ ಇದ್ದಿದ್ದರೆ ಅರ್ಥದ ತೊಡಕು ಏನೂ ಉಂಟಾಗುತ್ತಿರಲಿಲ್ಲ. ಅಥವಾ ನಾನು ನೋಡಿದ ಪುಸ್ತಕದಲ್ಲಿ ಅಚ್ಚಿನ ದೋಷವಿದೆಯೋ ಗೊತ್ತಿಲ್ಲ. ಆದರೆ ಹೀಗಿರುವುದರಿಂದ ಮಾತ್ರ ಈ ವಚನ ಹಲವು ಪ್ರಶ್ನೆಗಳನ್ನು ಎತ್ತುವಂತೆ ತೋರುತ್ತದೆ. ನನ್ನ ಮೊರೆಯನ್ನು ಕೇಳಬೇಕೆನಿಸಿದರೆ ಕೇಳು, ಇಲ್ಲದಿದ್ದರೆ ಬಿಡು; ನೀನು ನನ್ನನ್ನು ನೋಡಬೇಕೆನಿಸಿದರೆ ನೋಡು, ಇಲ್ಲದಿದ್ದರೆ ಬಿಡು. ಹೀಗಿರುವುದು ನಿನ್ನ ವಿಧಿಯೋ? ನೀನು ನನ್ನ ಒಲಿಯದಿದ್ದರೆ ನಾನು ನಿನ್ನನ್ನು ಒಲಿಸುವ ಪರಿ ಹೇಗೆ ಎಂದು ಅಕ್ಕ ಕೇಳುತ್ತಾಳೆ.

ದೇವರು ನಿರ್ಗುಣ ಅನ್ನುತ್ತಾರಲ್ಲವೆ, ಹಾಗಿರಬೇಕಾದದ್ದು ಅವನ ಹಣೆಯಬರಹ. ದೇವರು ಯಾರನ್ನೂ ದ್ವೇಷಿಸಲೂ ಆರ, ಪ್ರೀತಿಸಲೂ ಆರ. ಹೀಗಿರುವುದು ಅವನ ವಿಧಿಯೇ ಆದರೆ ತಾನು ದೇವರನ್ನು ಎಷ್ಟು ಪ್ರೀತಿಸಿದರೆ ಏನು ಬಂದ ಹಾಗಾಯಿತು? ಅವನಲ್ಲಿ ನನ್ನ ಬಗ್ಗೆ ಪ್ರೀತಿ ಹುಟ್ಟದಿದ್ದರೆ ಏನು ತಾನೇ ಮಾಡಬಲ್ಲೆ ಎಂಬ ದಿಕ್ಕುಗಾಣದ ಕಳವಳ ಈ ವಚನದಲ್ಲಿರುವಂತಿದೆ.

ಇದೇ ಸ್ವರೂಪದ ಇನ್ನೊಂದು ದೀರ್ಘವಾದ ವಚನವೂ ಇದೆ. ಅದರಲ್ಲಿ ನೀನು ಏನು ಮಾಡಿದರೂ ನಾನು ಮಾತ್ರ ನಿನ್ನನ್ನು ಪ್ರೀತಿಸದೆ ಇರಲಾರೆ ಅನ್ನುವ ನಿಲುವು ಕಾಣುತ್ತದೆ. ಮನೋಭಾವಗಳ ಸೂಕ್ಷ್ಮವನ್ನು ಅಕ್ಕನ ಹಾಗೆ ಮಾತಿನಲ್ಲಿ ಹಿಡಿದಿಟ್ಟವರು ಕಡಮೆ.
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...