Home / ಲೇಖನ / ಇತರೆ / ವಚನ ವಿಚಾರ – ಹೀಗೆ ಸಂತೋಷ

ವಚನ ವಿಚಾರ – ಹೀಗೆ ಸಂತೋಷ

ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತಾಯಿತ್ತು
ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ
ಇಹದ ಸುಖ ಪರದ ಗತಿ ನಡೆದು ಬಂದಂತಾತ್ತು ನೋಡಾ ಎನಗೆ
ಚೆನ್ನಮಲ್ಲಿಕಾರ್ಜುನಯ್ಯಾ
ಗುರುಪಾದವ ಕಂಡು ಧನ್ಯಳಾದೆ ನೋಡಾ

[ಅರಲುಗೊಂಡ ಬತ್ತಿದ ಬರಲುಗೊಂಡ-ಒಣಗಿದ]

ಅಕ್ಕಮಹಾದೇವಿಯ ವಚನ. ಅಕ್ಕ ತನ್ನ ಗುರುವನ್ನು ಕಂಡು ಆದ ಸಂತೋಷವನ್ನಿಲ್ಲಿ ವ್ಯಕ್ತಪಡಿಸಿದ್ದಾಳೆ. ಈ ವಚನದ ಚೆಲುವು ಇರುವುದು ಆಕೆ ಬಳಸಿರುವ ಹೋಲಿಕೆಗಳಲ್ಲಿ, ಮಾತಿನ ಲಯದಲ್ಲೇ ಮನಸ್ಸಿಗೆ ಆದ ಸಂತೋಷ ನೆಮ್ಮದಿಗಳನ್ನು ಪ್ರಕಟಿಸಿರುವ ರೀತಿಯಲ್ಲಿ.

ಬತ್ತಿ ಹೋದ ಕೆರೆಗೆ ತೊರೆಯೇ ಹರಿದು ಬಂದರೆ ಬತ್ತಿದ ಕೆರೆಗೆ ಆಗುವ ಸಂತೋಷದಂತೆ, ಒಣಗಿ ಬರಲು ಬರಲಾಗಿರುವ ಸಸಿಯ ಮೇಲೆ ಮಳೆ ಸುರಿದಾಗ ಆಗುವ ಸಂತೋಷದಂತೆ ಗುರುವಿನ ಪಾದ ಕಂಡಾಗ ನನಗನ್ನಿಸಿತು. ಇಹದ ಸುಖ, ಪರದ ಗತಿ ನನ್ನತ್ತ ನಡೆದುಬಂದಂತಾಯಿತು ಎನ್ನುತ್ತಾಳೆ.

ಬತ್ತಿ ಹೋದದ್ದು, ನಿರ್ಜೀವವೇ ಆದದ್ದು ಮತ್ತೆ ತುಂಬಿಕೊಂಡ, ಜೀವಂತವಾದ ಸಾರ್ಥಕತೆ ಗುರುವನ್ನು ಕಂಡಾಗ ಆಯಿತು. ಇದು ಇಹದ ಸುಖ, ಹಾಗೆಯೇ ಗುರುವು ಪರದ ದಾರಿಯನ್ನೂ ಮುಂದಿನ ಗತಿಯನ್ನೂ ತೋರಬಲ್ಲವನು. ಗುರುವನ್ನು ದೈವದ ಇನ್ನೊಂದು ರೂಪವೇ ಎಂದು ಕಾಣುವುದರಿಂದ ಚನ್ನಮಲ್ಲಿಕಾರ್ಜುನನನ್ನು ತೋರಬಲ್ಲಾತನ ಕಂಡ ಸಂತೋಷವನ್ನು ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...