Home / ಲೇಖನ / ಇತರೆ / ವಚನ ವಿಚಾರ – ಹೀಗೆ ಸಂತೋಷ

ವಚನ ವಿಚಾರ – ಹೀಗೆ ಸಂತೋಷ

ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತಾಯಿತ್ತು
ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ
ಇಹದ ಸುಖ ಪರದ ಗತಿ ನಡೆದು ಬಂದಂತಾತ್ತು ನೋಡಾ ಎನಗೆ
ಚೆನ್ನಮಲ್ಲಿಕಾರ್ಜುನಯ್ಯಾ
ಗುರುಪಾದವ ಕಂಡು ಧನ್ಯಳಾದೆ ನೋಡಾ

[ಅರಲುಗೊಂಡ ಬತ್ತಿದ ಬರಲುಗೊಂಡ-ಒಣಗಿದ]

ಅಕ್ಕಮಹಾದೇವಿಯ ವಚನ. ಅಕ್ಕ ತನ್ನ ಗುರುವನ್ನು ಕಂಡು ಆದ ಸಂತೋಷವನ್ನಿಲ್ಲಿ ವ್ಯಕ್ತಪಡಿಸಿದ್ದಾಳೆ. ಈ ವಚನದ ಚೆಲುವು ಇರುವುದು ಆಕೆ ಬಳಸಿರುವ ಹೋಲಿಕೆಗಳಲ್ಲಿ, ಮಾತಿನ ಲಯದಲ್ಲೇ ಮನಸ್ಸಿಗೆ ಆದ ಸಂತೋಷ ನೆಮ್ಮದಿಗಳನ್ನು ಪ್ರಕಟಿಸಿರುವ ರೀತಿಯಲ್ಲಿ.

ಬತ್ತಿ ಹೋದ ಕೆರೆಗೆ ತೊರೆಯೇ ಹರಿದು ಬಂದರೆ ಬತ್ತಿದ ಕೆರೆಗೆ ಆಗುವ ಸಂತೋಷದಂತೆ, ಒಣಗಿ ಬರಲು ಬರಲಾಗಿರುವ ಸಸಿಯ ಮೇಲೆ ಮಳೆ ಸುರಿದಾಗ ಆಗುವ ಸಂತೋಷದಂತೆ ಗುರುವಿನ ಪಾದ ಕಂಡಾಗ ನನಗನ್ನಿಸಿತು. ಇಹದ ಸುಖ, ಪರದ ಗತಿ ನನ್ನತ್ತ ನಡೆದುಬಂದಂತಾಯಿತು ಎನ್ನುತ್ತಾಳೆ.

ಬತ್ತಿ ಹೋದದ್ದು, ನಿರ್ಜೀವವೇ ಆದದ್ದು ಮತ್ತೆ ತುಂಬಿಕೊಂಡ, ಜೀವಂತವಾದ ಸಾರ್ಥಕತೆ ಗುರುವನ್ನು ಕಂಡಾಗ ಆಯಿತು. ಇದು ಇಹದ ಸುಖ, ಹಾಗೆಯೇ ಗುರುವು ಪರದ ದಾರಿಯನ್ನೂ ಮುಂದಿನ ಗತಿಯನ್ನೂ ತೋರಬಲ್ಲವನು. ಗುರುವನ್ನು ದೈವದ ಇನ್ನೊಂದು ರೂಪವೇ ಎಂದು ಕಾಣುವುದರಿಂದ ಚನ್ನಮಲ್ಲಿಕಾರ್ಜುನನನ್ನು ತೋರಬಲ್ಲಾತನ ಕಂಡ ಸಂತೋಷವನ್ನು ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...