Home / ಲೇಖನ / ಇತರೆ / ನಾ ಕಂಡ ಸಂಗೀತ ಕಾರಂಜಿ

ನಾ ಕಂಡ ಸಂಗೀತ ಕಾರಂಜಿ

ನಾ ಮೊದಲು ಕಂಡಿದ್ದು- ಬೃಂದಾವನ ಗಾರ್ಡನ್‌ನ ಸಂಗೀತ ಕಾರಂಜಿಯನ್ನು ನಂತರ ಎದೆತುಂಬಿ ಹಾಡಿದೆನು… ಆ ನಂತರ ಗಣಪತಿ ಸಚ್ಚಿದಾನಂದ ಸ್ವಾಮಿ ಆಶ್ರಮದಲ್ಲಿ- ದಸರಾ ಗೋಷ್ಠಿಗಳಲ್ಲಿ ಅಬ್ಬಾ! ಮೈಸೂರಿನಲ್ಲಿ ಮನೆಮನೆಗಳಲ್ಲಿ ಸಂಗೀತ ಕಾರಂಜಿ ಹರಿಯುತ್ತಿದೆ. ನಮ್ಮ ನೋವ ಮರೆಯಲಿಲ್ಲಿ ತಕ್ಕನಾಗಿದೆ.

ದಿನಾಂಕ ೦೮.೦೮.೨೦೧೫ ರಂದು ಶನಿವಾರದ ದಿನದಂದು ಜಗಮೋಹನ ಪ್ಯಾಲೇಸ್ ಸಭಾಭವನದಲ್ಲಿ ತಣ್ಣನೆಯ ಸಂಜೆಯಲಿ ರಾಷ್ಟ್ರೀಯ ಅಂತರರಾಷ್ಟ್ರೀಯ ಖ್ಯಾತಿ ವಿಖ್ಯಾತಿ ಪ್ರಖ್ಯಾತಿಯ ಗಾಯಕಿಯರಾದ ರಂಜನಿ ಹಾಗೂ ಗಾಯತ್ರಿ ಇವರ ಸಂಗೀತ ಕಾರಂಜಿಗೆ ಜನರು ಸುಜನರಲ್ಲಿ ಕಿಕ್ಕಿರಿದು ಸೇರಿತ್ತು.

ಕೊನೆಯ ಸೀಟಿನಲ್ಲಿದ್ದೆ! ಸಂಗೀತ ಇಂಪೆನಿಸಲಿಲ್ಲವೆಂದರೆ ಎದ್ದು ಹೋಗಲು ಎಂದು. ಆದರೆ… ಕೇಳುತ್ತಾ ಕೇಳುತ್ತಾ ಭಲೇ ರಸಾನುಭೂತಿ ಕಲಗಿತು!

“ಹೂವಿನಿಂದ ನಾರು ಸ್ವರ್ಗ ಸೇರಿತು” ಎನ್ನುವಂತೆ ನನ್ನ ಮಡದಿ ಮಣಿ ವೆಂಕಟಲಕ್ಷ್ಮಿಯಿಂದ ಒಳ್ಳೆಯ ಸಂಗೀತ ಕಾರಂಜಿಗೆ ಬಂದಿದ್ದೆ. ಮೈಸೂರು ಮೈಸೂರಿನ ಜನರೇ ಹಾಗೆ ಮೈಸೂರು ಮಲ್ಲಿಗೆಯಾ ಹಾಗೇ… ಕರ್ನಾಟಕ ಶಾಸ್ತ್ರೀಯ ಗಾಯನ ಜನರ ಮನಸ್ಸು ತಣಿಸಿತು.

ಸಂಗೀತವೇ ಹಾಗೆ ಗೊತ್ತಿಲ್ಲದವರ ತಲೆದೂಗುವಂತೆ ಮಾಡುವ ಮೋಡಿ ಅದಕ್ಕಿದೆ!

ಅಲ್ಲಿ ಆರಂಭ ಶೂರತ್ವವಿರಲಿಲ್ಲ. ಪ್ರತಿಭೆ, ಉತ್ಪತ್ತಿ, ಸಾಧನೆ, ಏನೆಲ್ಲ ಅಲ್ಲಿ ಮೇಳೈಸಿತ್ತು. ಅವರು ಸಂಗೀತ ಶಾರದೆಯರಂತೆ ಜನರ ಸೂರೇಗೊಂಡರು.

ಅಬ್ಬಾ! “ಶ್ರೀ ಮಹಾ ಗಣಪತಿಂ ಭಜೇಹಂ” ಎಂದು ನಮ್ಮ ಮೈಸೂರು ಮಹಾರಾಜರ ಹಾಡನ್ನು ಹಾಡಿದ ರೀತಿ ಎಲ್ಲರಿಗೆ ಮೆಚ್ಚಿಗೆಯಾಯಿತು. ನಂತರ “ಓಂ ನಮೋ ಭಗವತೇ ವಾಸುದೇವಾಯ”, “ಯಾರೆ ರಂಗನ ಯಾರೆ ಕೃಷ್ಣನ” ಮೈಸೂರು ವಾಸುದೇವಾಚಾರ್‍ಯರ “ಭಜನಸೇಯರಾದ” ಶ್ಯಾಮಾಶಾಸ್ತ್ರಿಗಳ “ನನ್ನುಯ್ರೋವು ಲಲಿತ” ತ್ಯಾಗರಾಜರ “ಇಂತ ಸೌಖ್ಯಮನಿ ನೇ…” ಮುತ್ತಯ್ಯ ಭಾಗವತರ “ಶರವಣ ಭವ ಸಮಯಮಿದಿರಾ” ಪುರಂದರದಾಸರ “ಆದದ್ದೆಲ್ಲ ಒಳಿತೇ ಆಯಿತು” “ನಾಚತೆ ಆಯ ನಟಿಕಟ್ಗಿರಿಧರ್” “ಎಂಥಾ ಪುಣ್ಯವೇ ಗೋಪಿ”, “ವಿಕೋಬ ಸಂಗ ಸದಾ” ಇವೆಲ್ಲ ಕೇಳುಗರ ಮನದಲ್ಲಿ ರಸಸ್ವಾದನೆಯನ್ನುಂಟು ಮಾಡಿದವು.

ಸಂಗೀತ ಅದರಲ್ಲೂ ಇಂಥಾ ಸಾಧಕಿಯರಾದ ಇಂಥಾ ಗಾಯಕಿಯರು ಕೇಳುಗರ ಮನವನ್ನು ಗೆಲ್ಲಬಲ್ಲವರೆಂಬುದಕ್ಕೆ ಅಲ್ಲಿ ಕಿಕ್ಕಿರಿದು ನಿಂತು ಕೆಳಗೆ ಹೊರಗೆ ಬಾಗಿಲಲ್ಲಿ ಗುಂಪುಗುಂಪು ಕೇಳುತ್ತಿತ್ತು. ಜನರು ತಲೆದೂಗಿ ಖುಷಿಖುಷಿಯಲ್ಲಿ ಚಪ್ಪಾಳೆ ಹೊಡೆಯುತ್ತಿತ್ತು.

ಎಂದರೋ ಮಹಾನುಭವರು ಉತ್ಕೃಷ್ಟ ಸ್ಥಾಯಿಯಲ್ಲಿ ಸುಲಲಿತ ಸುಮಧುರ ಸೌಖ್ಯ ಭಾವ ಪೂರ್‍ವ ಮನೋಜ್ಞವಾಗಿ ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಪಂಕ್ತಿಯಲಿ ಇವರ ಹೆಸರುಗಳು ಬಹುಕಾಲ ಉಳಿಯುವುವು ಎಂದು ಮನದುಂಬಿ ಬರೆದಿರುವೆ. ಆದ್ದರಿಂದ ಪುಟಾಣಿಗಳೆ… ನೀವೂ ಸಂಗೀತ ಕಲಿಯುವತ್ತ ಆಸಕ್ತಿಯುಳ್ಳವರಾಗಿ ಎಂದು ಹರಸುವೆ. ಆಗಬಹುದೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...