Home / ಲೇಖನ / ಇತರೆ / ನಾ ಕಂಡ ಸಂಗೀತ ಕಾರಂಜಿ

ನಾ ಕಂಡ ಸಂಗೀತ ಕಾರಂಜಿ

ನಾ ಮೊದಲು ಕಂಡಿದ್ದು- ಬೃಂದಾವನ ಗಾರ್ಡನ್‌ನ ಸಂಗೀತ ಕಾರಂಜಿಯನ್ನು ನಂತರ ಎದೆತುಂಬಿ ಹಾಡಿದೆನು… ಆ ನಂತರ ಗಣಪತಿ ಸಚ್ಚಿದಾನಂದ ಸ್ವಾಮಿ ಆಶ್ರಮದಲ್ಲಿ- ದಸರಾ ಗೋಷ್ಠಿಗಳಲ್ಲಿ ಅಬ್ಬಾ! ಮೈಸೂರಿನಲ್ಲಿ ಮನೆಮನೆಗಳಲ್ಲಿ ಸಂಗೀತ ಕಾರಂಜಿ ಹರಿಯುತ್ತಿದೆ. ನಮ್ಮ ನೋವ ಮರೆಯಲಿಲ್ಲಿ ತಕ್ಕನಾಗಿದೆ.

ದಿನಾಂಕ ೦೮.೦೮.೨೦೧೫ ರಂದು ಶನಿವಾರದ ದಿನದಂದು ಜಗಮೋಹನ ಪ್ಯಾಲೇಸ್ ಸಭಾಭವನದಲ್ಲಿ ತಣ್ಣನೆಯ ಸಂಜೆಯಲಿ ರಾಷ್ಟ್ರೀಯ ಅಂತರರಾಷ್ಟ್ರೀಯ ಖ್ಯಾತಿ ವಿಖ್ಯಾತಿ ಪ್ರಖ್ಯಾತಿಯ ಗಾಯಕಿಯರಾದ ರಂಜನಿ ಹಾಗೂ ಗಾಯತ್ರಿ ಇವರ ಸಂಗೀತ ಕಾರಂಜಿಗೆ ಜನರು ಸುಜನರಲ್ಲಿ ಕಿಕ್ಕಿರಿದು ಸೇರಿತ್ತು.

ಕೊನೆಯ ಸೀಟಿನಲ್ಲಿದ್ದೆ! ಸಂಗೀತ ಇಂಪೆನಿಸಲಿಲ್ಲವೆಂದರೆ ಎದ್ದು ಹೋಗಲು ಎಂದು. ಆದರೆ… ಕೇಳುತ್ತಾ ಕೇಳುತ್ತಾ ಭಲೇ ರಸಾನುಭೂತಿ ಕಲಗಿತು!

“ಹೂವಿನಿಂದ ನಾರು ಸ್ವರ್ಗ ಸೇರಿತು” ಎನ್ನುವಂತೆ ನನ್ನ ಮಡದಿ ಮಣಿ ವೆಂಕಟಲಕ್ಷ್ಮಿಯಿಂದ ಒಳ್ಳೆಯ ಸಂಗೀತ ಕಾರಂಜಿಗೆ ಬಂದಿದ್ದೆ. ಮೈಸೂರು ಮೈಸೂರಿನ ಜನರೇ ಹಾಗೆ ಮೈಸೂರು ಮಲ್ಲಿಗೆಯಾ ಹಾಗೇ… ಕರ್ನಾಟಕ ಶಾಸ್ತ್ರೀಯ ಗಾಯನ ಜನರ ಮನಸ್ಸು ತಣಿಸಿತು.

ಸಂಗೀತವೇ ಹಾಗೆ ಗೊತ್ತಿಲ್ಲದವರ ತಲೆದೂಗುವಂತೆ ಮಾಡುವ ಮೋಡಿ ಅದಕ್ಕಿದೆ!

ಅಲ್ಲಿ ಆರಂಭ ಶೂರತ್ವವಿರಲಿಲ್ಲ. ಪ್ರತಿಭೆ, ಉತ್ಪತ್ತಿ, ಸಾಧನೆ, ಏನೆಲ್ಲ ಅಲ್ಲಿ ಮೇಳೈಸಿತ್ತು. ಅವರು ಸಂಗೀತ ಶಾರದೆಯರಂತೆ ಜನರ ಸೂರೇಗೊಂಡರು.

ಅಬ್ಬಾ! “ಶ್ರೀ ಮಹಾ ಗಣಪತಿಂ ಭಜೇಹಂ” ಎಂದು ನಮ್ಮ ಮೈಸೂರು ಮಹಾರಾಜರ ಹಾಡನ್ನು ಹಾಡಿದ ರೀತಿ ಎಲ್ಲರಿಗೆ ಮೆಚ್ಚಿಗೆಯಾಯಿತು. ನಂತರ “ಓಂ ನಮೋ ಭಗವತೇ ವಾಸುದೇವಾಯ”, “ಯಾರೆ ರಂಗನ ಯಾರೆ ಕೃಷ್ಣನ” ಮೈಸೂರು ವಾಸುದೇವಾಚಾರ್‍ಯರ “ಭಜನಸೇಯರಾದ” ಶ್ಯಾಮಾಶಾಸ್ತ್ರಿಗಳ “ನನ್ನುಯ್ರೋವು ಲಲಿತ” ತ್ಯಾಗರಾಜರ “ಇಂತ ಸೌಖ್ಯಮನಿ ನೇ…” ಮುತ್ತಯ್ಯ ಭಾಗವತರ “ಶರವಣ ಭವ ಸಮಯಮಿದಿರಾ” ಪುರಂದರದಾಸರ “ಆದದ್ದೆಲ್ಲ ಒಳಿತೇ ಆಯಿತು” “ನಾಚತೆ ಆಯ ನಟಿಕಟ್ಗಿರಿಧರ್” “ಎಂಥಾ ಪುಣ್ಯವೇ ಗೋಪಿ”, “ವಿಕೋಬ ಸಂಗ ಸದಾ” ಇವೆಲ್ಲ ಕೇಳುಗರ ಮನದಲ್ಲಿ ರಸಸ್ವಾದನೆಯನ್ನುಂಟು ಮಾಡಿದವು.

ಸಂಗೀತ ಅದರಲ್ಲೂ ಇಂಥಾ ಸಾಧಕಿಯರಾದ ಇಂಥಾ ಗಾಯಕಿಯರು ಕೇಳುಗರ ಮನವನ್ನು ಗೆಲ್ಲಬಲ್ಲವರೆಂಬುದಕ್ಕೆ ಅಲ್ಲಿ ಕಿಕ್ಕಿರಿದು ನಿಂತು ಕೆಳಗೆ ಹೊರಗೆ ಬಾಗಿಲಲ್ಲಿ ಗುಂಪುಗುಂಪು ಕೇಳುತ್ತಿತ್ತು. ಜನರು ತಲೆದೂಗಿ ಖುಷಿಖುಷಿಯಲ್ಲಿ ಚಪ್ಪಾಳೆ ಹೊಡೆಯುತ್ತಿತ್ತು.

ಎಂದರೋ ಮಹಾನುಭವರು ಉತ್ಕೃಷ್ಟ ಸ್ಥಾಯಿಯಲ್ಲಿ ಸುಲಲಿತ ಸುಮಧುರ ಸೌಖ್ಯ ಭಾವ ಪೂರ್‍ವ ಮನೋಜ್ಞವಾಗಿ ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಪಂಕ್ತಿಯಲಿ ಇವರ ಹೆಸರುಗಳು ಬಹುಕಾಲ ಉಳಿಯುವುವು ಎಂದು ಮನದುಂಬಿ ಬರೆದಿರುವೆ. ಆದ್ದರಿಂದ ಪುಟಾಣಿಗಳೆ… ನೀವೂ ಸಂಗೀತ ಕಲಿಯುವತ್ತ ಆಸಕ್ತಿಯುಳ್ಳವರಾಗಿ ಎಂದು ಹರಸುವೆ. ಆಗಬಹುದೇ??
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...