Home / ಲೇಖನ / ವಿಜ್ಞಾನ / ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಡುತ್ತಾರೆ.

ಕಾಲಿಪ್ಲವರ್ ಮತ್ತು ಕ್ಯಾಬೆಜ್‌ಗಳಲ್ಲಿ ಇಂಡೋಲ್ (ಇಂಡೋಲ್-೩ ಕಾರ್ಬಿನೊಲ್) ಎಂಬ ರಾಸಾಯನಿಕವಿರುತ್ತದೆ. ಈ ರಾಸಾಯನಿಕಗಳು ಮಾನವನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತವೆ. ಈ ತರಕಾರಿಗಳನ್ನು ಸೇವಿಸಿದಾಗ ಅದರಲ್ಲಿರುವ ಇಂಡೋಲ್ ರಾಸಾಯನಿಕವು ದೇಹದಲ್ಲಿಡಿ ಇಂಡೋ ಲಿಮಿಥೇನ್ ಆಗಿ (DIM) ಪರಿವರ್ತನೆಗೊಳ್ಳುತ್ತದೆ. ಅನಂತರ ಅದು ಕ್ಯಾನ್ಸರ್ ಜೀವಕೋಶದ ಬೆಳವಣಿಗೆ ವಿರುದ್ದ ಆಕ್ರಮಣ ಆರಂಭಿಸುತ್ತದೆ. ದೇಹದಲ್ಲಿ ಆಂಡ್ರೋಜನ್ ಎಂಬ ಹಾರ್ಮೋನಿನ ಶ್ರಾವ ಅಧಿಕವಾಗಿ ಅದರ ಚಟುವಟಿಕೆ ತೀವ್ರವಾದರೆ ಅದು ಮೂತ್ರಕೋಶದ ಕಂಠದ ಗ್ರಂಥಿಯ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಗೆ ನೆರವಾಗುತ್ತದೆ. ಕಾಲಿಪ್ಲವರ್ ಮತ್ತು ಕ್ಯಾಬೆಜ್ ದಲ್ಲಿರುವ ರಾಸಾಯನಿಕ ಡಿ ಇಂಡೋಲಿಮಿಥೆನ್ ಆಂಡ್ರೋಜೆನನ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ. ಡಿ ಇಂಡೋಲಿಥೇನ್ ರಾಸಾಯನಿಕದ ಆಕ್ರಮಣ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ಶೇ. ೭೦ ರಷ್ಟು ಕಡಿಮೆ ಮಾಡುತ್ತದೆ. ಎಂದು ಬಯಾಲಾಜಿಕಲ್‌ಕೆಮಿಸ್ಟ್ರಿ ಪತ್ರಿಕೆಯ ಈಚಿನ ಸಂಚಿಕೆಯೊಂದರಲ್ಲಿ ಪ್ರಕಟವಾಗಿದೆ. ಇಂಡೋಲ್ ರಾಸಾಯನಿಕವು ಹೃದಯಾಘಾತವನ್ನು ತಡೆಗಟ್ಟಲು ನೆರವಾಗುತ್ತದೆ ಎಂದು ಇದೇ ಸಂಶೋಧಕರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...