Home / ಲೇಖನ / ವಿಜ್ಞಾನ / ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಡುತ್ತಾರೆ.

ಕಾಲಿಪ್ಲವರ್ ಮತ್ತು ಕ್ಯಾಬೆಜ್‌ಗಳಲ್ಲಿ ಇಂಡೋಲ್ (ಇಂಡೋಲ್-೩ ಕಾರ್ಬಿನೊಲ್) ಎಂಬ ರಾಸಾಯನಿಕವಿರುತ್ತದೆ. ಈ ರಾಸಾಯನಿಕಗಳು ಮಾನವನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತವೆ. ಈ ತರಕಾರಿಗಳನ್ನು ಸೇವಿಸಿದಾಗ ಅದರಲ್ಲಿರುವ ಇಂಡೋಲ್ ರಾಸಾಯನಿಕವು ದೇಹದಲ್ಲಿಡಿ ಇಂಡೋ ಲಿಮಿಥೇನ್ ಆಗಿ (DIM) ಪರಿವರ್ತನೆಗೊಳ್ಳುತ್ತದೆ. ಅನಂತರ ಅದು ಕ್ಯಾನ್ಸರ್ ಜೀವಕೋಶದ ಬೆಳವಣಿಗೆ ವಿರುದ್ದ ಆಕ್ರಮಣ ಆರಂಭಿಸುತ್ತದೆ. ದೇಹದಲ್ಲಿ ಆಂಡ್ರೋಜನ್ ಎಂಬ ಹಾರ್ಮೋನಿನ ಶ್ರಾವ ಅಧಿಕವಾಗಿ ಅದರ ಚಟುವಟಿಕೆ ತೀವ್ರವಾದರೆ ಅದು ಮೂತ್ರಕೋಶದ ಕಂಠದ ಗ್ರಂಥಿಯ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಗೆ ನೆರವಾಗುತ್ತದೆ. ಕಾಲಿಪ್ಲವರ್ ಮತ್ತು ಕ್ಯಾಬೆಜ್ ದಲ್ಲಿರುವ ರಾಸಾಯನಿಕ ಡಿ ಇಂಡೋಲಿಮಿಥೆನ್ ಆಂಡ್ರೋಜೆನನ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ. ಡಿ ಇಂಡೋಲಿಥೇನ್ ರಾಸಾಯನಿಕದ ಆಕ್ರಮಣ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ಶೇ. ೭೦ ರಷ್ಟು ಕಡಿಮೆ ಮಾಡುತ್ತದೆ. ಎಂದು ಬಯಾಲಾಜಿಕಲ್‌ಕೆಮಿಸ್ಟ್ರಿ ಪತ್ರಿಕೆಯ ಈಚಿನ ಸಂಚಿಕೆಯೊಂದರಲ್ಲಿ ಪ್ರಕಟವಾಗಿದೆ. ಇಂಡೋಲ್ ರಾಸಾಯನಿಕವು ಹೃದಯಾಘಾತವನ್ನು ತಡೆಗಟ್ಟಲು ನೆರವಾಗುತ್ತದೆ ಎಂದು ಇದೇ ಸಂಶೋಧಕರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...