Home / ಕವನ / ಕವಿತೆ / ಗಣಪತಿಯ ಸ್ತೋತ್ರ

ಗಣಪತಿಯ ಸ್ತೋತ್ರ

ಗಂಧ ಕಸ್ತುರಿ ಪುನಗಽ |
ಗೌರವ್ವನ | ಕಂದಗ ಧರಿಸಿದರಽ |
ಅಂದದ ಬಿಳಿ‌ಎಲಿ ಆಡಕಿ ಕಾಚವು ಸುಣ್ಣ |
ಮುಂದ ಮಡೆಚಿನಿಟ್ಟು ಮಲ್ಲಿಽಗಿ ಮಳೆಗರೆದ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೧||

ರಾಜಾನ್ನ ಕೆನೆಮಸರಽ |
ರುಚಿಗಾಯಿ | ಭೋಜನಕ ಸವಿಮಜ್ಜಿಗೆಽ |
ಸಾಜನಾಗಿ ಬಂದು ಸೆಳೆಮಂಚದಲಿ ಕುಳಿತು |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೨||

ಹಣ್ಣ ಹಪ್ಪಳ ಶೆಂಡಿಽಗಿ |
ಎಳಸಾದ | ಸಣ್ಣ ಶಾವಿಗಿ ಬಸೆದಽ |
ಉಂಡ ಮಗಿ ನೊರೆಹಾಲ ಉದರ-ಸಕ್ಕರಿ ತುಪ್ಪ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೩||

ಚಿಗುಳಿ ಚಿನ್ಪಾಲ್ ಬಚ್ಚೇವಽ |
ಚಿಟುಬಾಳಿ | ಅಗಲೋಳು ಗರಿಕಾಣೆನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೪||

ಸುರ ಹರಿ ನಮ ದೇವರ ಕಾಳಿಽ |
ಧೊರಿಪೂಜಿ | ಧೊರಿಪೂಜಿ ಮಾಽಡುನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೫||
*****

ಈ ಹಾಡಿನ ಮೊದಲನೆಯ ನುಡಿಯಲ್ಲಿ ಪೂಜೆಯ ಪರಿಯೂ ಮುಂದಿನ ಮೂರು ನುಡಿಗಳಲ್ಲಿ ನೈವೇದ್ಯದ ವಿಸ್ತಾರವೂ ವರ್ಣಿಸಲ್ಪಟ್ಟಿವೆ. ಕೊನೆಯ ನುಡಿಯು ಸಾಂಪ್ರದಾಯಿಕವಾಗಿದೆ.

ಛಂದಸ್ಸು: ಐದೈದು ಮಾತ್ರೆಯ ಗಣಗಳಿವೆ. ಮೊದಲನೆಯ ನುಡಿಯಲ್ಲಿ ಒಂದು ಡೊಡ್ಡ ಚರಣವು ಹೆಚ್ಚಿಗೆ ಬಿದ್ದಿದೆ.

ಶಬ್ದ ಪ್ರಯೋಗಗಳು: ಸಾಜ=ಶೃಂಗಾರ. ಸೆಳೆಮಂಚ=ತೂಗುಮಣೆ. ಸೋಬಸ್ತ=ಶೋಭಿಸುತ್ತ. ಏರಸ್ತ=ಏರಿಸುತ್ತೇನೆ. ಧೊರಿಪೂಜಿ=ವೈಭವದ ಪೂಜೆ. ಸೆಂಡೆಗಿ, ಹೆಪ್ಪಳ, ಶಾಂವಗಿ, ಚಿಗುಳಿ ಇವು ಭೋಜನದ ಪದಾರ್ಥಗಳು. ಚಿನ್ಪಾಲ್‌ ಮತ್ತು ಬಚ್ಚೇವ ಎಂಬವುಗಳೂ ಅವೇ. ಆದರೆ ಇವೆರಡರ ಸರಿಯಾದ ಕಲ್ಪನೆ ಮಾತ್ರ ಬರುವಂತಿಲ್ಲ.

“ಚಿಟುಬಾಳಿ ಅಗಲೋಳು ಗರಿ ಕಾಣೆನ” ಎಂದರೆ ಕಿರಿಬಾಳಿಯ ಎಲೆಯ ಮೇಲೆ ಎಡೆಬಡಿಸಿದ ಸಾಮಗ್ರಿಗಳು, ಎಲೆಯ ನಡುವಿನ ಗರಿ ಕಾಣದಷ್ಟು ತುಂಬಿದ್ದನೆಂದು ಅರ್‍ಥ.

ಈ ಹಾಡು ಪಾಂಚಾಲ ಜಾತಿಯವರಲ್ಲಿ ಪ್ರಚಾರವುಳ್ಳದ್ದಾಗಿರುವುದರಿಂದ ಅವರ ಆರಾಧ್ಯದೈವತವಾದ ಕಾಲೀದೇವಿಯ ಉಲ್ಲೇಖವು ಕೊನೆಯ ನುಡಿಯಲ್ಲಿದೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...