Home / ಕವನ / ಕವಿತೆ / ಫಂಢರಪುರದ ವಿಠೋಬನ ಸ್ತೋತ್ರ

ಫಂಢರಪುರದ ವಿಠೋಬನ ಸ್ತೋತ್ರ

ಇಟ್ಟೀಗಿ ಕಲ್ಲ ಮ್ಯಾಲ ಊರಿ ನಿಂತಾನೆರಡು ಪಾದ |
ಜರದ ಮಂದೀಲ ಶಾಲ
ಇಳಿಯ ಬಿಽಟ್ಟಾರ ಜೋಲ
ನಾದ ಬ್ರಹ್ಮ ಮೇಘ ಶಾಮ
ಸೃಷ್ಟಿ ಕರ್ತ ಸರ್ವ ಗೋಮ
ಸಾದು ಸಂತಽರ ಪ್ರೇಮ
ಹ್ಯಾಂಗ ನಿಂತಾರೆನಗ ಪೇಳಿರೇ | ಶ್ರೀಪಾಂಡುರಂಗ |
ಹ್ಯಾಂಗ ನಿಂತಾರೆನಗ ಪೇಳಿರೇ ||೧||

ಟೊಂಕದ ಮ್ಯಾಲ ಕೈಯನಿಟ್ಟು ಹೃದಯದಲ್ಲಿ ಲತ್ತಿಪೆಟ್ಟು
ತೆಗ್ಗು ಬಿತ್ತು ಒಳ್ಳೆ ಎಷ್ಟು
ದುಕ್ಕ ಇಲ್ಲ ಎಳ್ಳಿನಷ್ಟು
ತುಳಸಿ ಮಾಳಿ ಬುಽಕ್ಕಿಟ್ಟು
ಹಗಲ ಇರಳ ಭಜನಿಗೋಳು
ಅವಂದೇ ಅಂಸ ಮೃದುಂಗ ತಾಳ
ಮದನ ಮೂರ್ತಿ ಗೋಽಪಾಳ
ಸಾದು ಸಂತಽರ ಮ್ಯಾಳ
ಹ್ಯಾಂಗ ನಿಂತಾರೆನಗ ಪೇಳಿರೇ | ಶ್ರೀಪಾಂಡುರಂಗ |
ಹ್ಯಾಂಗ ನಿಂತಾರೆನಗ ಫೇಳಿರೇ ||೨||

ಟಿಪ್ಪಿಗೀ ಲಿಂಗಕಾರ ಟಿಳಕ ಬಣ್ಣ ಚಂದ್ರತಾರಾ
ಮುಂದ ಹರಿವ ಭೀಮ ತೀರ
ಪುಣ್ಯಕ್ಷೇತ್ರ ಪಂಡರಿಪೂರ
ಪುಂಡಲೀಕ ಗೋಪುಕಾರ
ಚಾತುರ್ಮಾನ ಪರಸಿ ಭಾಳ
ಯೋಗಿ ಜನರಿಗಽಪರೂಪ
ನೇಮದಿಂದ ಸುಡುವ ಪಾಪ
ಈತನೇನ ಬೌದ್ಧ್ಯ ರೂಪ
ಹ್ಯಾಂಗ ನಿಂತಾರೆನಗ ಪೇಳಿರೇ | ಶೀಪಾಂಡುರಂಗ |
ಹ್ಯಾಂಗ ನೀಂತಾರೆನಗ ಪೇಳಿರೇ ||೩||

ಹಾಸ್ಯನದನ ಕಮಲನಯನ ಶೇಷಶಯನ ಗರುಡವಾಹನ
ಶಿಷ್ಯಮೂಳ ನಿಜಧಾಮ
ರಾಮರಸ ರಸದಿಂದ
ಎಂದಿಗೀ ದೊರಕ್ಯಾನಂದ
ಹವಳ ಕೂಡಸ್ತ ಛೆಂದ
ಹ್ಯಾಂಗ ನಿಂತಾರೆನಗ ಪೇಳಿರೇ | ಶ್ರೀಪಾಂಡುರಂಗ |
ಹ್ಯಾಂಗ ನಿಂತಾರೆನಗ ಪೇಳಿರೇ ||೪||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...