Home / ಕವನ / ಕವಿತೆ / ಇಡು ಭಕ್ತಿ, ನಡೆ ಮುಂದೆ

ಇಡು ಭಕ್ತಿ, ನಡೆ ಮುಂದೆ

ಅನುದಿನವು ಇಡು ಭಕ್ತಿಯನ್ನು ದೇವನಡಿಯಲ್ಲಿ
ಅನುಸರಿಸು ಸನ್ಮಾರ್‍ಗವನೆ ನಿತ್ಯ ಮುದದಿ.
ಎತ್ತಲುಂ ಕತ್ತಲೆಯು ಸುತ್ತಿಹುದು ದಾರಿಯನು
ಕಿತ್ತುಬಿಡು ಭಯವನ್ನು, ಎತ್ತು ಪೌರುಷವಾ.
ಅತ್ತಿತ್ತ ಕದಲದಿರು, ಚಿತ್ತವನು ಸ್ಥಿರಗೊಳಿಸು,
ಎತ್ತರದೊಳಿದೆ ತಾರೆ, ಉತ್ತಮದಿ ನಡಿಸಲ್.

ಕಡು ಭಯಂಕರವಾಗಿ, ನಡೆಯಲಸದಳವಾದ
ಕಡೆಗಾಣದಿಹಹಾದಿ ಹಿಡಿದು ನೀನಿರಲು,
ಒಡಲ ಬಲ ಲೆಕ್ಕಿಸದೆ, “ಬಡವಾದೆ, ನೊಂದೆ”ನದೆ
ಇಡು ಹೆಜ್ಜೆ, ನಡೆ ಮುಂದೆ, ಬಿಡು ಭೀತಿ ಭಯವಾ.

ಕೆಟ್ಟ ಕುಹಕೋಪಾಯ, ಕೆಟ್ಟ ತಂತ್ರಗಳನ್ನು
ಬಿಟ್ಟು ಬೆಳಕಿಗೆ ಅಂಜಿ, ಗುಟ್ಟಾಗಿರುವುದಂ,
ಬಟ್ಟೆ ತುದಿಯನು ಹೇಗೆ ಮುಟ್ಟಲಾಪುದೆ ನೋಡು!
ಕಟ್ಟಕಡೆಗಿರಲಿ ಜಯ! ಪಟ್ಟಿರಲಿ ಸೋಲು!

ಇದೆ ಸುರಕ್ಷಿತ ಮಾರ್ಗ! ಇದೆ ಸರಳ ಕಟ್ಟಳೆಯು!
ಇದೆ ಅಂತಃ ಶಾಂತಿ! ಇದೆ ಮನೋಬಲವು!
ಇದೆ ಸತ್ಪಥವ ತೋರೆ ಉದಯಿಸಿದ ಧ್ರುವ ತಾರೆ
ಇದನೆ ಪಠಿಸೈ ನೀನು, ಇದನೆ ಜಪಿಸುತಿರು.

ಕೆಲರು ಬರಿ ಹೊಗಳುವರು; ಕೆಲರು ಬರಿ ತೆಗಳುವರು;
ಕೆಲರು ಮತ್ಸರಿಸುವರು; ಕೆಲರು ಮೆಚ್ಚಿಪರು;
ಹಲವರನು ಮೆಚ್ಚಿಸುವ ಕೆಲಸವೇತಕೆ ನಿನಗೆ?
ಒಲಿಸು ಹರಿಯನು; ನಿನ್ನ ಕೆಲಸವನು ಸಲಿಸು.
*****
(ಸ್ವದೇಶಾಭಿಮಾನಿಯಿಂದ)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...