Home / ಕವನ / ಕವಿತೆ / ಅರಳಿದ ಸಂಜೆ

ಅರಳಿದ ಸಂಜೆ

ಈ ಮೌನ ಸಂಜೆ ಬೀದಿಯಲ್ಲಿ ಹೊರಟಿವೆ
ಇರುವೆಗಳ ಮೆರವಣಿಗೆ, ಮರದ ಕೆಳಗೆ,
ಒಳಗೆ ಪೋರ ಚೆಂಡು ಹುಡುಕುತ್ತಿದ್ದಾನೆ,
ಮತ್ತೆ ಚಿಟ್ಟೆ ಹರಿದಾಡದೇ ಕುಳಿತಿದೆ ಹೂವಿನ ಮೇಲೆ.

ಖಾಲಿ ಹಾಳಿಯಲಿ ಅರಳಿವೆ ಕವಿಯ ನೀಲಿ ಅಕ್ಷರಗಳು,
ಮುಗಿಲ ತುಂಬ ಬೆಳ್ಳಕ್ಕಿ ಸಾಲು ಬುದ್ಧ ಗಯಾಕ್ಕೆ ಹಾರಿವೆ,
ರೂಹುಗಳ ಒಡಲಲ್ಲಿ ಅರಿಳಿದ ಪರಿಮಳದ ಅನ್ನ,
ಜೋಲಿಯಲಿ ಕನಸು ಕಂಗಳ ಕಂದನ ಸಂಜೆ ನಿದ್ದೆ.

ತಣ್ಣಗೆ ಹರಿಯುತ್ತಿದೆ ನದಿ. ಮೀನುಗಳ ಒಡಲು,
ಶರತ್ಕಾಲದ ತುಸು ಹಳದಿ ಎಲೆ ಎದುರಿದೆ ನಿರಾಳವಾಗಿ,
ಆಗಸದ ತುಂಬ ನೆನಪುಗಳ ಚುಕ್ಕಿ ಚಂದ್ರಮ ಅರಳುವಾಗ,
ಅಮ್ಮ ದೇವರ ಮುಂದೆ ನೀಲಾಂಜನ ಹಚ್ಚಿದಾಳೆ.

ಸ್ಪರ್ಶಕ್ಕಾಗಿ ಕಾದ ಸಂಜೆಯ ನೆರಳು ಬರೆದ ಅಕ್ಷರಗಳ,
ತಬ್ಬಿಕೊಂಡಿವೆ ಜಗದ ಜನರ ಬೆವರಿನ ನಿಟ್ಟುಸಿರು.
ಸಾವಿರ ಕವನಗಳ ಬೇರು ಮೌನಗರ್ಭದಲ್ಲಿ ಮೊಳೆತು,
ಸಂಜೆ ಚಂದ್ರ ಉದಯಿಸುತ್ತಾನೆ ಹೊಸ ಪ್ರತಿಮೆಗಳ ಹೊತ್ತು.

ಮರದಲ್ಲಿ ಹೂವು ಅರಳಿ ಕಂಪ ತೇಲಿದ ಕವನ,
ಸುಮ್ಮನೆ ಒಂದು ಖುಷಿಯ ಚಿಲುಮೆಯ ಕಿಡಿ.
ಸುಖದಲ್ಲಿ ಮಿಂದವರ, ದುಃಖದಲ್ಲಿ ಬಳಲಿದವರ,
ರಾತ್ರಿಯ ಕನಸುಗಳು ತೊಳೆಯುತ್ತವೆ. ಮತ್ತೆ ಶುಭ್ರ
ಮುಂಜಾವಿಗೆ ಕಾದಿವೆ ಕಣ್ಗಳು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...