Home / ಕವನ / ಕವಿತೆ / ಸ್ವಪ್ನದ ದೋಣಿ

ಸ್ವಪ್ನದ ದೋಣಿ

ಇಳಿ ಬಿಸಿಲಿನ ಎಲೆಯ ಮೇಲೆ ಕಿರಣಗಳು
ಮೂಡಿ ನಂದಾದೀಪ ಅರಳಿದೆ. ಕಂಬ ಬಳಸಿದ
ಬಳ್ಳಿಯ ತುಂಬ ಬಿಳಿ ಮೊಗ್ಗು ಬಿರಿದು, ಶಬ್ದಗಳು
ಹಸನಾದ ಬೀದಿಯ ತುಂಬ ಹರಡಿದೆ. ಅಲ್ಲಿ
ಕವಿಯ ಪರೀಕ್ಷೆ ನಡೆದಿದೆ. ಹೊಲದಲ್ಲಿ ಹಸಿ
ಜೋಳದ ತೆನೆಯಲಿ ಹಾಲು ಚಿಮ್ಮುತ್ತಿದೆ. ಮತ್ತೆ
ಮೌನ ಸಂಜೆಯಲಿ ಅವನ ನೆನಪುಗಳು ನೆತ್ತಿಗೆ
ಸವರಿ ಬೆಳ್ಳಕ್ಕಿಗಳು ಹಾರಿ ಹೋಗಿವೆ ತಿಳಿಸಂಜೆ.

ಪುಟ್ಟ ಹಕ್ಕಿಗಳ ಗೂಡು ಹಾಡು, ಕಡಲ
ಅಲೆ ಅಲೆಯ ಪ್ರತಿಬಿಂಬಿಸಿ, ಚಿಪ್ಪಿನಲ್ಲಿ ಅರಳಿತು ಮುತ್ತು.
ತೆಂಗಿನ ಗರಿಯ ಸಂದಿಯಿಂದ ಚೌತಿ ಚಂದ್ರಮ
ಇಣುಕಿ ಸ್ಪರ್ಶಿಸಿದೆ ಪ್ರಣಯ ಜೋಡಿಗಳ, ಹೊಸ
ವಾರ್ತೆ ನಾಳೆಗೆ ಅಚ್ಚಾಗಲು ಸಿದ್ಧವಾಗಿದೆ. ಜಾರಿದೆ
ಕಚಗುಳಿ ಇಟ್ಟ ಸೂರ್ಯ ಕಿರಣಗಳು, ರಾತ್ರಿಯ
ಕಪ್ಪು ಪರದೆಯ ತುಂಬ ಚಲನ ಚಿತ್ರಗಳ ರೀಲು.
ಆಗಸದಲ್ಲಿ ಹರಡಿವೆ ಅವನ ಕಣ್ಣುಗಳ ಮಿನುಗು.

ಹೂಗಳ ಸುವಾಸನೆ ಹೀರಿದ ಹಕ್ಕಿಗಳು ಹಾಡು
ತೊಟ್ಟಿಲು ತೂಗುತ್ತಿದ್ದಾಳೆ ತಾಯಿ. ತೊನೆ ಹಾಲು ತುಂಬಿ
ಎದೆಯ ಭಾವಕೆ ಬೇರುಗಳಲಿ ಇಳಿದ ತಂಪು ಲಾಲಿ.
ಕತ್ತಲೆಯ ರಾತ್ರಿಯಲ್ಲಿ ಹೊಸ ಬೆಳಕಿನ ಜಾಡು,
ಹಿಡಿದು ಕಾಲ ಮೈಲುಗಳು ಬಳಸಿ, ಪಯಣ
ಹೊರಟಿದೆ. ಹೆದ್ದಾರಿ ತುಂಬ ಕಪ್ಪು ನೆರಳುಗಳಾಟ.
ಜಗದ ಬೆಳಕಿಗೆ ಸೂರ್ಯ ಕಣ್ಣು ಮುಚ್ಚಿದ್ದಾನೆ.
ಪುಟ್ಟ ಮಗುವಿನ ಕೈಗಳು ಕೊರಳುಗಳ ತಬ್ಬಿವೆ.
ಏಕಾಂತ ಮೌನದಲಿ ಸುವಾಸನೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ