Home / ಕವನ / ಕವಿತೆ / ದುರಂತ

ದುರಂತ

ಹೂವು ಅರಳಿದ ಮರದ ಕೆಳಗೆ
ಕುಳಿತ ಅವಳು ಕನಸಿನ ಅರಮನೆಯ
ರಾಜಕುಮಾರಿಯಂತೆ ಮಗಳ ತಬ್ಬಿ
ಎದೆಗಪ್ಪಿಕೊಂಡಿದ್ದಾಳೆ. ಆಕಾಶದಲ್ಲಿ ಒಂಟಿ
ಹದ್ದು ಹಾರಾಡುತ್ತಿದೆ ಆ ಮಟಮಟ ಮಧ್ಯಾಹ್ನದಲಿ.

ನೆರಳ ನೆನಪುಗಳಲಿ ತಣ್ಣ ಮಣ್ಣಲಿ
ಸಡಗರದಲ್ಲಿ ಬೆಳಕು ಅರಳುತಿರಲು
ಯಾವುದೋ ನಿಶಾನೆಯ ಕಪ್ಪು ಮೋಡ ತೇಲಿ
ಮೈಯುಬ್ಬಿ ನಾಲ್ಕು ನಿಟ್ಟಿನ ಎಲ್ಲೆ ಕಟ್ಟು ಹರಿದು
ಬಯಕೆಗಳ ಮಂಗನಾಟ ಸಾರಿದೆ ಪಯಣ
ಏಕಾಂತದಲಿ.

ಹೊಲದುದ್ದಕ್ಕೂ ಹರಿದಾಡಿತ್ತು ನೇಗಿಲು ಮೊನೆ
ಬಸಿರೆಲ್ಲ ಬರಿದು ಬಸಿದು ಹೊರಚೆಲ್ಲಿತ್ತು ಜೀವದ ಸೊನೆ,
ಬೆದೆಯ ಕಾವಿಗೆ ಸಿಕ್ಕ ಹೂವಿನ ಒಡಲು ತುಂಬ
ನಾಗಸಂಪಿಗೆಯ ಕಾವು, ಒಂದು ಘಳಿಗೆಯಲಿ
ಅರಿವಿಲ್ಲದೆ ಪರಿವಿಲ್ಲದೇ ಜೀವ ಝಲ್ಲನೆ ಬೆತ್ತಲೆ
ಆ ಹೊತ್ತಿನಲಿ.

ಕೊಬ್ಬೇರಿದ ಮಬ್ಬಿನಲಿ, ಅಂಗಾಂಗದ ಗೂಳಿ ಮರದಲೋಕದ
ಹೊಸದಾದ ಕಂಪು ಮೆದ್ದವನಂತೆ ಕೆಂಗಣ್ಣು ಹಾಲನುಂಡ
ಹಸುಳೆ ಕದಡಿ, ಹೆಣದ ವಾಸನೆ ಕಾಮೀನ್ಮಕ ಆಹಾ ಯೋನಿ
ಚಕಿತಾ ಹದಗೇರಿದ ಪ್ರಾಣ ತೊಡೆಕಣಿವೆಯ ತಗ್ಗಿನಲಿ ನೆತ್ತರು,
ತುಂಬಿ ಇಡೀ ಹೊಲದಲ್ಲಿ ಬಾಲೆಯ ಅಳು.
*****

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...