Home / ಕವನ / ಕವಿತೆ / ಜಾತ್ರೆ

ಜಾತ್ರೆ

ಆ ಜಾತ್ರೆಯ ತುಂಬೆಲ್ಲಾ ಮಣ್ಣ ವಾಸನೆ
ಹರ್ಷ ಗೆಲವು ಅತಿರೇಕಗಳು ತೊಟ್ಟಿಕ್ಕುವ
ನಾಟಕಗಳು ಅಂಕದ ಪರದೆ, ಹೆಜ್ಜೆಗಳ ಮೇಲೆ
ಅವರಿವರ ಪಾದದ ಗುರುತುಗಳು.

ಆಶ್ಚರ್ಯ ಆಸಕ್ತಿಯ ಪರದೆಯ ಕತ್ತಲು
ಬೆಳಕಿನಲಿ ಮಾರಾಟಕ್ಕೆ ಇವೆ ನಿರ್ಗತಿಕನ ಕನಸುಗಳು.
ಗುಂಪಿನ ಮಧ್ಯದ ಒಂದು ಗದ್ದಲಲಿ ಎಲ್ಲ
ದರ್ಶನಗಳು, ತಲೆಮಾರು ದಾಟಿದ ಬೆಳಕ ಕಿರಣಗಳು.

ಕೂಗಾಟ, ಹರ್ಷ, ಜೂಜು, ಬಾಜಿ ಎಲ್ಲರೂ ಖುಷಿ
ಮನರಂಜನೆಯ ಲೋಕಪ್ರಿಯ, ತಮ್ಮ ಪಾಲಿಗೆ
ದಕ್ಕಿದ ಕ್ಷಣಗಳ ಉಸಿರಾಡುತ್ತಿದ್ದಾರೆ. ಮತ್ತೆ ಡೊಂಬರಾಟ
ನಡೆದಿದೆ. ಸೂರ್ಯ ಎದ್ದ ಧೂಳಿಗೆ ಮಂಕಾಗಿದ್ದಾನೆ.

ರಾಶಿ ಹಾಕಿದ ಗುಂಪಿನಲಿ ಮಗುವಿನ ಗೊಂಬೆ,
ಅಳುತ್ತಿದೆ ಹಾಲಿಗಾಗಿ, ಎಲ್ಲರೂ ವ್ಯಾಪಾರದ ಭರಾಟೆಯಲಿ,
ಕಷ್ಟದ ನಷ್ಟ ತುಂಬವ ಲೆಕ್ಕಾಚಾರದಲಿ ತೊಡಗಿದ್ದಾರೆ.
ಅವಳು ನೋಡುತ್ತಿದ್ದಾಳೆ ಗಾಳಿ ಬೀಸಿದತ್ತ ಚದುರುವ ಜನಗಳ,

ಒಂದು ಊಟ, ಒಂದು ಆಟದ ಸಾಮಾನು ಮಗಳಿಗೆ
ಕೊಡಿಸಬಹುದಾಗಿತ್ತು, ಆದರೆ ಆತುರದ ಜೀವ
ಹಸಿದ ಪ್ರಾಣಿಯಂತೆ, ಅವಳ ಹಿಂಬಾಲಿಸಿ ಸನ್ನೆ ಮಾಡುತ್ತಿತ್ತು.
ಕಣ್ಣೀರಿನಿಂದ ಸುಟ್ಟ ಅವಳ ಕಣ್ಣುಗಳಲಿ ಬಹಳಷ್ಟು ವರ್ಷಗಳ ದುಃಖ.
ಜಾತ್ರೆ ಜನಜಂಗುಳಿಯ ಮಧ್ಯೆ ಸಂತಳ ನೆರಳು ಹರಡಿತ್ತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...