Home / ಕವನ / ಕವಿತೆ / ಅನಾವರ್ತ

ಅನಾವರ್ತ

ಬೆಳಕಿನ ಸೂರ್ಯ ಉದುರಿಸುತ್ತಾನೆ
ಆವರ್ತ ಬೀಜಗಳು ಸಾಗರದಲಿ.
ತೇಲಿ ಮತ್ತೆ ಹನಿ ಆಗಿ ಆಗಸಕ್ಕೇರಿ
ಬಿಳಿ ಮೋಡಗಳು ತೇಲಿದ ನೀಲಿ ಆಕಾಶ.

ಎಲ್ಲಾ ಗುಟ್ಟುಗಳ ನಿನ್ನಲ್ಲೇ ಇರಿಸಿಕೊಂಡು
ಅವಸ್ಥೆಯಲಿ ಒಲೆಬೆಂಕಿ ಉರಿದು,
ಬೀಜಗಳ ರೊಟ್ಟಿಗಳು ಹರಡಿದ ಬದುಕು.
ಗಾಳಿ ಬೀಸಿ ತೇಲಿದ ಪಟ ನೀಲಿ ಆಕಾಶ,

ತಿರುಗಿ ತಿರುಗಿ ಮೇಲೇರಿ ಕೆಳಗಿಳಿದ
ಚಕ್ರತೊಟ್ಟಿಲು, ಏರಿದವರು ಇಳಿದು
ಇಳಿದವರು ಏರಿ ಆವರ್ತದ ಪರಧಿ.
ನಿಯಮಕ್ಕೆ ಅರಳಿದ ಹೂಗಳ ನೀಲಿ ಆಕಾಶ.

ಹೊರಗಿನ ಬೆಳದಿಂಗಳ ತಂಪು ಎದೆಯೊಳಗೆ
ಇಳಿದು ಹಿತದ ಮೆತ್ತನೆ ಪೀಠದ ಬುದ್ಧ.
ಶಾಶ್ವತ ಭ್ರಮೆಯ ಹೊಡೆದೋಡಿಸಿ ಈ
ಆವರ್ತನೆಯ ಜಾಲ ಬಿಡಿಸಿಕೊಂಡ ಮುಕ್ತ.

ಏರುವುದು ಇಳಿಯುವುದು ಎಲ್ಲಾ
ಗೊಂದಲಗಳ ದಾಟಿ, ನೀ ಅತಿಥಿ.
ನಡೆದ ದಾರಿತುಂಬ ದಿವ್ಯ ಬೆಳಗು ಸೂರ್ಯ
ಅನಾವರ್ತನದ ಚೇತನ ಚಿಂತನ ಬೆಳಗು.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...