Home / ಕವನ / ಕವಿತೆ / ನಂದಾದೀಪ

ನಂದಾದೀಪ

ಹರಿದ ಸೀರೆಯಲಿ ನೂರೆಂಟು
ತೇಪೆಯ ಚಿತ್ತಾರ
ಅರಿಶಿನದ ಓಕುಳಿ ಕೆನ್ನೆಗೆ
ಹಣೆಯಲಿ ಕಾಸಿನಗಲದ
ಕುಂಕುಮದ ಸಿಂಗಾರ
ಮುಡಿಯಲ್ಲಿ ಮಾಸದ ಹೂವಿನ ದಂಡೆ
ಮುಗ್ಧ ಮಗುವಿನ ಮೊಗ
ಅಲ್ಲಿ ನಗುವೆಂಬ ನಗ
ಕಂಗಳಲ್ಲಿ ಬತ್ತದ ವಾತ್ಸಲ್ಯದ ಒರತೆ
ಆಧುನಿಕ ಗಂಧಗಾಳಿಯ ಕೊರತೆ
ಕಡಲಿಗೂ ಸಮನಾಗದ
ಮಮತೆಯ ಬಿಂದು
ಆಗಸದ ಪಾತ್ರಕ್ಕೂ ಹಿರಿದು
ಕಾರುಣ್ಯಸಿಂಧು
ಮಾತಿನಲಿ ಕುಗ್ಗದ ಅಗಾಧ ಪ್ರೀತಿ
ಮರುಳಾಗಿಸಿ ಮಣಿಸುವ ಮಾಂತ್ರಿಕ ಶಕ್ತಿ
ಮುಚ್ಚುಮರೆಯಿಲ್ಲದ ಬಿಚ್ಚುನುಡಿ
ಕಪಟ ಮೋಸವರಿಯದ ಶುದ್ಧ ಕನ್ನಡಿ
ಗಂಧದ ಮರ ಬೇಕಿಲ್ಲ ಉಪಮೆಗೆ
ಕರ್ಪೂರದಾರತಿ ಕಾಂತಿ ಕಂಗಳೊಳಗೆ
ನಿನ್ನೆ ನಾಳೆಗಳ ಚಿಂತೆ ತೊರೆದು
ಬೇಕು ಬೇಡಗಳ ಪಟ್ಟಿ ಕಿತ್ತೆಸೆದು
ಉರಿವ ಒಲೆಯೊಳಗೆ ಕನಸು,
ಕಲ್ಪನೆಗಳ ಸುಟ್ಟ ಬೂದಿ.
ವಾಸ್ತವತೆಯ ಪರಿಧಿಯಲ್ಲಿ
ಗರಗರ ತಿರುಗುವ ಗಾಣದೆತ್ತು
ಅಪ್ಪ ಹಾಕಿದ ಲಕ್ಷ್ಮಣ ರೇಖೆ
ಮೀರಿ ದಾಟಿದ ಭಯಭಕ್ತಿ
ತುತ್ತು ಅನ್ನ ಹಿಡಿಯಷ್ಟು ಪ್ರೀತಿ
ಪಂಚಾಮೃತವೆನ್ನುವ ಪರಮ ತೃಪ್ತಿ
ನೂರು ದೇವರ ನಿವಾಳಿಸಿ
ಒಗೆಯಬೇಕಿವಳ ಮುಂದೆ
ಕರುಳು ಬತ್ತಿಯ ನೇದು
ನೆತ್ತರ ತೈಲವನೆರೆದು
ಒಡಲ ಕುಡಿಗಳ ಬೆಳಗುವ
ನಿತ್ಯ ಉರಿಯುವ ನಂದಾದೀಪ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...