Home / ಕವನ / ಕವಿತೆ / ಬದಲಾಗದವರು

ಬದಲಾಗದವರು

ಬೆನ್ನು ಬಾಗಿಸಿಕೊಂಡು ತಂದುದನ್ನು
ಅಟ್ಟುಕೊಂಡು ಉಟ್ಟುಕೊಂಡು
ಪಾಡು ಪಟ್ಟುಕೊಂಡು
ಜೀ ಹುಜೂರ್ ಹಾಡಿಕೊಂಡು
ಉಸಿರು ಬಿಡಲು
ಅಪಣೆ ಬೇಡಿಕೊಂಡು
ಕೀ ಕೊಟ್ಟ ಗೊಂಬೆಗಳಂತೆ
ಕುಣಿಯುವವರು ನಾವು
ಕುಣಿಸುವವರು ನೀವು.
ನಿಮ್ಮ ಪಾದಕ್ಕೆ ಮೂಗುದಾರಕ್ಕೆ
ಮಣಿದು ತಾಳಕ್ಕೆ ಕುಣಿದು
ಇಷ್ಟಾನಿಷ್ಟಗಳ ಒರೆಹಚ್ಚಿ
ನಿಮ್ಮ ಭಾಗ್ಯದ ಪ್ರಗತಿಗೆ
ಹಿರಿಮೆಗೆ ಗರಿಮೆಗೆ
ಕುಲದ ಉದ್ಧಾರಕ್ಕೆ
ಬೇಡುವವರು ನಾವು
ಬೇಡಿಸುವವರು ನೀವು.
ಕಾಲನ ಪರಿಧಿಯೊಳಗೆ ಏಳುತ್ತಾ
ಬೀಳುತ್ತಾ ಕನಸುಗಳ ಕತ್ತರಿಸುತ್ತಾ
ಬವಣೆಗಳಲ್ಲೇ ಸುಖವನ್ನರಸುತ್ತಾ
ನೋವಿನಲ್ಲೂ ನಗುವ ಕಾಣುತ್ತಾ
ಹಣೆಬರಹವ ಹಳಿಯುತ್ತಾ
ನಿಂತ ನೀರಾಗಿ ನೀರಲ್ಲೇ ಕರಗಿ
ಕೊಳೆಯುವವರು ನಾವು
ಕೊಳೆಯಿಸುವವರು ನೀವು.
ಆರಕ್ಕೇರದೆ ಮೂರಕ್ಕಿಳಿಯದೆ
ಇತ್ತಲೂ ಇಲ್ಲದೇ ಅತ್ತಲೂ ಸಲ್ಲದೇ
ಹಳೆಯದನ್ನು ಬಿಡಲಾಗದೆ
ಹೊಸದನ್ನು ಅಪ್ಪಿಕೊಳ್ಳದೆ
ದ್ವಂದ್ವದಲಿ ಸೆಣಸುತ್ತಾ
ಬದಲಾದರೂ ಕಾಲ ದೇಶ ಸಂಸ್ಕೃತಿ
ಬದಲಾಗದವರು ನಾವು
ಬದಲಾಗಿಸದವರು ನೀವು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...