Home / ಕವನ / ಕವಿತೆ / ಉದಾರೀಕರಣ

ಉದಾರೀಕರಣ

ವಿದೇಶಿ ಬಂಡವಾಳಿಗರ
ಸೆಳೆಯಲು ಹೆಣೋರ್ವಳ
ಹೂನಗೆ ಹೊತ್ತ
ಸಂಸ್ಕೃತಿಯ ಮುಸುಕಿನಲಿ
ಮುಗುಳ್ನಗೆಯ ಸ್ವಾಗತ,
ವಿದೇಶಿ ಬಂಡವಾಳಕ್ಕೆ
ಇದೇ ಸುವರ್ಣಾವಕಾಶ.
ಬನ್ನಿ ಏಡ್ಸ್‌ನ ಭಯವಿಲ್ಲ
ಬಹಳ ಉದಾರಿಗಳು ನಾವು
ಮುಕ್ತ ಮಾರುಕಟ್ಟೆಯಲ್ಲಿ
ಪರಕೀಯರಿಗೆ ಮಾರಿಕೊಂಡ
ಕೇವಲ ಶೃಂಗಾರ ಸಾಧನಗಳು
ನಿಷ್ಕಪಟ ಮುಗ್ಧ ಹಸುಳೆಗಳು
ಮುಖವಿಲ್ಲದವರಿಗೆ ಉಣಬಡಿಸಲು
ಕಂದಮ್ಮಗಳ ಕನಸುಗಳನು
ನಿರ್ದಯವಾಗಿ ಹೊಸಕಿ
ಅಂಧಕಾರದ ಕೂಪಕ್ಕೆ
ಕರುಣೆಯಿಲ್ಲದೆ ನೂಕುವ-
ಅಂಗಾಂಗ ಕಸಿ ಮಾಡಿ
ಬಿಡಿಯಾಗಿ ಬೇಕಿದ್ದರೆ
ಇಡಿಯಾಗಿ ಕೊಡುತ್ತೇವೆ.
ಮಾನ ಅಡವಿಟ್ಟಾದರೂ
ಪ್ರನಾಳಕ್ಕೆ ಬಸಿರ ಹೊರಿಸಿ,
ಅತಂತ್ರ ಸಂಕೋಲೆಗಳಲ್ಲಿ
ಭ್ರೂಣಗಳ ಸಿಲುಕಿಸುತ್ತೇವೆ.
ಅಳಿದುಳಿದ ಕನಸುಗಳು
ಶಿಲುಬೆಗೇರಿಸುತ್ತಾ
ಹೊಸ ತಂತ್ರ ಮಂತ್ರಗಳು
ತಲೆಹಿಡುಕರ ಜಾಲಗಳು
ತಲೆಯೆತ್ತಿ ನಿಂತಿರುವ
ಹೊಸ ಅರ್ಥ ನೀತಿಗಳು,
ಉಳ್ಳವರ ತೆವಲುಗಳು,
ಕೊರಳಿಗೆ ಬಿದ್ದ ಉರುಳುಗಳು,
ಸಡಿಲಿಸಲು ಸಂಕೋಲೆ
ಹರಕೆಯ ಕುರಿಗಳು,
ಕೊಡವಿ ಎದ್ದರೆ ಪ್ರಜ್ಞೆ
ಇನ್ನೆಲ್ಲಿಯ ಬಲಿಗಳು ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...