Home / ಲೇಖನ / ವಿಜ್ಞಾನ / ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...