Home / ಕವನ / ಕವಿತೆ / ಚಿತ್ರದ ಅಂಗಡಿ

ಚಿತ್ರದ ಅಂಗಡಿ

ಗದುಗಿನ ನಾಡಹಬ್ಬದಲ್ಲಿ ಶ್ರೀ ಮಧುರ ಚೆನ್ನ ರಿ೦ದ ಪರೀಕ್ಷಿಸಲ್ಪಟ್ಟು ರಜತ ಪದಕವನ್ನು ಪಡೆದುದು

ಅಮಾ, ಚಿತ್ರದ ಅಂಗಡಿ ನೋಡೆ !
ಸುಂದರ ಸೊಬಗಿನ ಅಂಗಡಿ ನೋಡೆ !
ಬಗೆ ಬಗೆ ಬಣ್ಣದ ಪಟಗಳ ನೋಡೆ !
ಭಾರತದೇಶದ ಚಿತ್ರವನೋಡೆ ! || ೧ ||

ಅಮ್ಮಾ, ಇಲ್ಲಿದೆ ಹೆಚ್ಚಿನ ಚಿತ್ರ !
ಸಕಲರ ಮನವನು ಸೆಳೆಯುವ ಚಿತ್ರ !
ಇದುವೇ ನಾ ಹಟ ಮಾಡಿದ ಚಿತ್ರ !
ಕನ್ನಡ ಕುವರರ ಹೆಮ್ಮೆಯ ಚಿತ್ರ ! || ೨ ||

ಸುಂದರ ಬನಗಳ ಚಿತ್ರಿಪ ಚಿತ್ರ !
ಗುಡ್ಡ ಬೆಟ್ಟಗಳು ತುಂಬಿಹ ಚಿತ್ರ !
ಗೋದಾವರಿ ಹೊಳೆ ಹರಿದಿಹ ಚಿತ್ರ !
ಕಾವೇರಿಯು ತಾ ಕಾಖವ ಚಿತ್ರ ! || ೩ ||

ಅಮಾ, ಇಲ್ಲಿಹ ಗುಡಿಗಳ ನೋಡು !
ಜಕ್ಕಣ ಶಿಲ್ಪಿಯ ಜಾಣ್ಮಯ ನೋಡು !
ವಿಜಯನಗರದಾ ವೈಭವ ನೋಡು !
ಹುಕ್ಕ ಬುಕ್ಕ ಮಾಧವರನು ನೋಡು ! || ೪ ||

ಅಮ್ಮಾ, ಕುಮಾರವ್ಯಾಸನ ಚಿತ್ರ !
ಕಲ್ಯಾಣದ ಆ ಬಸವನ ಚಿತ್ರ !
ಚೆನ್ನಮ್ಮನ ಕಿತ್ತೂರಿನ ಚಿತ್ರ !
ಬೆಳವಡಿ ರಾಣಿಯ ಶೌರ್ಯದ ಚಿತ್ರ ! || ೫ ||

ಅಮ್ಮಾ, ಇದದೋ ಹಳ್ಳಿಯ ಚಿತ್ರ !
ನೇಗಿಲ ಹೊಡೆಯುವ ಯೋಗಿಯ ಚಿತ್ರ !
ರಾಟಿಯ ತಿರುಗಿಹ ಭಗಿನಿಯ ಚಿತ್ರ !
ಖಾದಿಯ ಕೊಳ್ಳುವ ಜನಗಳ ಚಿತ್ರ ! || ೬ ||

ಅಮ್ಮಾ ! ಭೀಕರ ದೃಶ್ಯವಿದಲ್ಲೆ ?
ಬಡವನ ಗೋಳಿನ ಚಿತ್ರವಿದಲ್ಲೆ ?
ಹೊಲೆಯರೆಂದು ಸಲೆ ಹಳಿಯುವರಲ್ಲೆ ?
ದಾಸ್ಯದ ದಾಹದಿ ಬಳಲುವರಲ್ಲೆ ? || ೭ ||

ಅಮ್ಮಾ, ಇಲ್ಲಿಹ ನೋಟವಿದೇನು ?
ಕನ್ನಡದಮ್ಮನು ಅಳುತಿಹಳೇನು ?
ಕರುನಾಡಿನ ಜನ ಮಲಗಿಹುದೇನು ?
ಪರನಾಡಿನ ಜನ ಬರುತಿಹುದೇನು ? || ೮ ||

ಅಮ್ಮಾ, ಬೇಕಿದು ಚಿತ್ರವು ನೋಡು !
ಅಯ್ಯೋ ! ಮರಾಠ ಬಂದನು ನೋಡು !
ತೆಲುಗನು ಬಂದನು ಕೊಳ್ವನು ನೋಡು !
ಅಪ್ಪನ ಹುಡುಕುವ ಬೇಗನೆ ಓಡು || ೯ ||

ಅಪ್ಪಾ ! ಅಪ್ಪಾ !! ಎಲ್ಲಿಹೆ ಬಾರೊ !
ಪ್ರೀತಿಯ ಚಿತ್ರವ ಕೊಳ್ವರು ಬಾರೋ !!
ಕರ್ನಾಟಕವಿದು ಪೊಪುದು ಬಾರೋ !!!
ಕನ್ನಡಿಗನೆ ನೀ ಬೇಗನೆ ಬಾರೋ !!!! || ೧೦ ||
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...