Home / ಕವನ / ಕವಿತೆ / ಚಿತ್ರದ ಅಂಗಡಿ

ಚಿತ್ರದ ಅಂಗಡಿ

ಗದುಗಿನ ನಾಡಹಬ್ಬದಲ್ಲಿ ಶ್ರೀ ಮಧುರ ಚೆನ್ನ ರಿ೦ದ ಪರೀಕ್ಷಿಸಲ್ಪಟ್ಟು ರಜತ ಪದಕವನ್ನು ಪಡೆದುದು

ಅಮಾ, ಚಿತ್ರದ ಅಂಗಡಿ ನೋಡೆ !
ಸುಂದರ ಸೊಬಗಿನ ಅಂಗಡಿ ನೋಡೆ !
ಬಗೆ ಬಗೆ ಬಣ್ಣದ ಪಟಗಳ ನೋಡೆ !
ಭಾರತದೇಶದ ಚಿತ್ರವನೋಡೆ ! || ೧ ||

ಅಮ್ಮಾ, ಇಲ್ಲಿದೆ ಹೆಚ್ಚಿನ ಚಿತ್ರ !
ಸಕಲರ ಮನವನು ಸೆಳೆಯುವ ಚಿತ್ರ !
ಇದುವೇ ನಾ ಹಟ ಮಾಡಿದ ಚಿತ್ರ !
ಕನ್ನಡ ಕುವರರ ಹೆಮ್ಮೆಯ ಚಿತ್ರ ! || ೨ ||

ಸುಂದರ ಬನಗಳ ಚಿತ್ರಿಪ ಚಿತ್ರ !
ಗುಡ್ಡ ಬೆಟ್ಟಗಳು ತುಂಬಿಹ ಚಿತ್ರ !
ಗೋದಾವರಿ ಹೊಳೆ ಹರಿದಿಹ ಚಿತ್ರ !
ಕಾವೇರಿಯು ತಾ ಕಾಖವ ಚಿತ್ರ ! || ೩ ||

ಅಮಾ, ಇಲ್ಲಿಹ ಗುಡಿಗಳ ನೋಡು !
ಜಕ್ಕಣ ಶಿಲ್ಪಿಯ ಜಾಣ್ಮಯ ನೋಡು !
ವಿಜಯನಗರದಾ ವೈಭವ ನೋಡು !
ಹುಕ್ಕ ಬುಕ್ಕ ಮಾಧವರನು ನೋಡು ! || ೪ ||

ಅಮ್ಮಾ, ಕುಮಾರವ್ಯಾಸನ ಚಿತ್ರ !
ಕಲ್ಯಾಣದ ಆ ಬಸವನ ಚಿತ್ರ !
ಚೆನ್ನಮ್ಮನ ಕಿತ್ತೂರಿನ ಚಿತ್ರ !
ಬೆಳವಡಿ ರಾಣಿಯ ಶೌರ್ಯದ ಚಿತ್ರ ! || ೫ ||

ಅಮ್ಮಾ, ಇದದೋ ಹಳ್ಳಿಯ ಚಿತ್ರ !
ನೇಗಿಲ ಹೊಡೆಯುವ ಯೋಗಿಯ ಚಿತ್ರ !
ರಾಟಿಯ ತಿರುಗಿಹ ಭಗಿನಿಯ ಚಿತ್ರ !
ಖಾದಿಯ ಕೊಳ್ಳುವ ಜನಗಳ ಚಿತ್ರ ! || ೬ ||

ಅಮ್ಮಾ ! ಭೀಕರ ದೃಶ್ಯವಿದಲ್ಲೆ ?
ಬಡವನ ಗೋಳಿನ ಚಿತ್ರವಿದಲ್ಲೆ ?
ಹೊಲೆಯರೆಂದು ಸಲೆ ಹಳಿಯುವರಲ್ಲೆ ?
ದಾಸ್ಯದ ದಾಹದಿ ಬಳಲುವರಲ್ಲೆ ? || ೭ ||

ಅಮ್ಮಾ, ಇಲ್ಲಿಹ ನೋಟವಿದೇನು ?
ಕನ್ನಡದಮ್ಮನು ಅಳುತಿಹಳೇನು ?
ಕರುನಾಡಿನ ಜನ ಮಲಗಿಹುದೇನು ?
ಪರನಾಡಿನ ಜನ ಬರುತಿಹುದೇನು ? || ೮ ||

ಅಮ್ಮಾ, ಬೇಕಿದು ಚಿತ್ರವು ನೋಡು !
ಅಯ್ಯೋ ! ಮರಾಠ ಬಂದನು ನೋಡು !
ತೆಲುಗನು ಬಂದನು ಕೊಳ್ವನು ನೋಡು !
ಅಪ್ಪನ ಹುಡುಕುವ ಬೇಗನೆ ಓಡು || ೯ ||

ಅಪ್ಪಾ ! ಅಪ್ಪಾ !! ಎಲ್ಲಿಹೆ ಬಾರೊ !
ಪ್ರೀತಿಯ ಚಿತ್ರವ ಕೊಳ್ವರು ಬಾರೋ !!
ಕರ್ನಾಟಕವಿದು ಪೊಪುದು ಬಾರೋ !!!
ಕನ್ನಡಿಗನೆ ನೀ ಬೇಗನೆ ಬಾರೋ !!!! || ೧೦ ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...