Home / ಲೇಖನ / ಇತರೆ / ವಚನ ವಿಚಾರ – ಹುಡುಕಾಟ

ವಚನ ವಿಚಾರ – ಹುಡುಕಾಟ

ಅರಸಿ ಅರಸಿ ಹಾ ಹಾ ಎನುತಿದ್ದೆನು
ಬೆದಕಿ ಬೆದಕಿ ಬೆದಬೆದ ಬೇವುತಿದ್ದೆನು
ಗುಹೇಶ್ವರಾ ಕಣ್ಣ ಮೊದಲಲ್ಲಿದ್ದವನ ಕಾಣೆನು

ಅಲ್ಲಮನ ವಚನ. ಅಪರೂಪಕ್ಕೆಂಬಂತೆ ಅಕ್ಕನ ವಚನದ ರೀತಿಯಲ್ಲಿ ಭಾವ ತುಂಬಿಕೊಂಡ ವಚನವಾಗಿದೆ ಇದು. ಮೊದಲ ಎರಡು ಸಾಲುಗಳು ಅಕ್ಕನ ವಚನದಲ್ಲೂ ಬರಬಹುದಾದಂಥವು ಅನ್ನಿಸುತ್ತದೆ. ಗುಹೇಶ್ವರ ಅನ್ನುವುದರ ಬದಲಾಗಿ ಚನ್ನಮಲ್ಲಿಕಾರ್ಜುನ ಎಂದಿದ್ದರೆ ಅವಳ ವಚನವಲ್ಲ ಅನ್ನುವ ಧೈರ್ಯ ಯಾರಿಗೆ ಬಂದೀತು! ಹಾಗೆಂದರೆ ವಚನಗಳನ್ನು ಓದಿ ನಾವು ಕಲ್ಪಿಸಿಕೊಂಡ ಅಲ್ಲಮನ ಮಾತಿನ ರೀತಿಯದಲ್ಲ ಅನ್ನಿಸುತ್ತದೆ ಎಂದಷ್ಟೆ ಅರ್ಥ. ವಚನ ರಚನೆಯಾಗಿ ಮುನ್ನೂರು ವರ್ಷಗಳ ನಂತರದ ಹಸ್ತಪ್ರತಿಗಳಲ್ಲಿ ಸಿಗುವ ವಚನಗಳಲ್ಲಿ ಅಂಕಿತ ಬದಲಾಗಿಲ್ಲವೆಂದು ಹೇಳುವುದು ಹೇಗೆ! ಇದು ಇಂಥವರ ವಚನ ಅನ್ನುವುದು ಒಂದು ರೂಢಿಯಷ್ಟೆ, ಇನ್ನೇನೂ ಅಲ್ಲ. ವಚನಗಳು ಮನುಷ್ಯ ಮನಸ್ಸಿನ ಸಾಧ್ಯತೆಗಳ ಭಾಷಿಕ ರೂಪಗಳು. ಯಾರಾದರೂ ಹೇಳಿರಬೇಕಲ್ಲ ಅನ್ನುವುದಕ್ಕೆ ವಚನಕ್ಕೆ ಒಬ್ಬೊಬ್ಬ ವಚನಕಾರರನ್ನು ಕಲ್ಪಿಸಿಕೊಂಡು ಇವರ, ಅವರ ವಚನ ಎಂದು ವಾಗ್ವಾದ ಮಾಡುತ್ತಾ ವಚನಗಳನ್ನು ಮರೆತಿದ್ದೇವೆ.

ಇರಲಿ. ಮೇಲು ಮೇಲಿನ ತೋರಿಕೆಯನ್ನು ಮರೆತರೂ ಕೊನೆಯ ಸಾಲು ಕೂಡ ಅಕ್ಕ-ಅಲ್ಲಮ ಇವರಿಗೆ ಸಮಾನವಾದ ಧೋರಣೆಯನ್ನು ವ್ಯಕ್ತಪಡಿಸುತ್ತಿದೆ. ಕಣ್ಣಮೊದಲಿನಲ್ಲಿ ಇರುವವನ್ನು, (ಮತ್ತೆ ಯಾರು, ನೋಡುತ್ತಿರುವವನೇ ಅಲ್ಲವೆ!) ಹೊರಗೆ ಹುಡುಕಿ, ಹಾಗೆ ಹುಡುಕಿ ದಣಿದೆ ಅನ್ನುತ್ತಿದೆ ಈ ಸಾಲು. ದಣಿದ ಪರಿಯನ್ನು ಮೊದಲೆರಡು ಸಾಲುಗಳು ಹೇಳುತ್ತಿವೆ.

ತಾನು ಹುಡುಕುತ್ತಿರುವುದು ತನ್ನೊಳಗೇ ಇರುವುದನ್ನು ಅನ್ನುವ ನಿಲುವು ಅಕ್ಕನದೂ ಹೌದು. ಆದ್ದರಿಂದಲೇ `ನೀನೇಕೆ ಮುಖದೋರೆ’ ಎಂದು ಅಕ್ಕ ಕೂಡ ಅಲವತ್ತುಕೊಳ್ಳುವುದುಂಟು. ಬರಿಯ ಅಕ್ಕ ಅಲ್ಲಮ ಮಾತ್ರವಲ್ಲ ನಾವು ಕೂಡ ನಮ್ಮೊಳಗೆ ಬಿಂಬಿತವಾದದ್ದನ್ನೆ ಹೊರಗೆ ಕಾಣಲು ಯತ್ನಿಸುತ್ತ ದಣಿಯುವವರಲ್ಲವೇ? ಹಾಗಾಗಿ ಇಂಥ ವಚನಗಳು ನಮ್ಮ ಮಾತುಗಳೂ ಆಗುತ್ತವೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...