Home / ಲೇಖನ / ಇತರೆ / ವಚನ ವಿಚಾರ – ಹುಡುಕಾಟ

ವಚನ ವಿಚಾರ – ಹುಡುಕಾಟ

ಅರಸಿ ಅರಸಿ ಹಾ ಹಾ ಎನುತಿದ್ದೆನು
ಬೆದಕಿ ಬೆದಕಿ ಬೆದಬೆದ ಬೇವುತಿದ್ದೆನು
ಗುಹೇಶ್ವರಾ ಕಣ್ಣ ಮೊದಲಲ್ಲಿದ್ದವನ ಕಾಣೆನು

ಅಲ್ಲಮನ ವಚನ. ಅಪರೂಪಕ್ಕೆಂಬಂತೆ ಅಕ್ಕನ ವಚನದ ರೀತಿಯಲ್ಲಿ ಭಾವ ತುಂಬಿಕೊಂಡ ವಚನವಾಗಿದೆ ಇದು. ಮೊದಲ ಎರಡು ಸಾಲುಗಳು ಅಕ್ಕನ ವಚನದಲ್ಲೂ ಬರಬಹುದಾದಂಥವು ಅನ್ನಿಸುತ್ತದೆ. ಗುಹೇಶ್ವರ ಅನ್ನುವುದರ ಬದಲಾಗಿ ಚನ್ನಮಲ್ಲಿಕಾರ್ಜುನ ಎಂದಿದ್ದರೆ ಅವಳ ವಚನವಲ್ಲ ಅನ್ನುವ ಧೈರ್ಯ ಯಾರಿಗೆ ಬಂದೀತು! ಹಾಗೆಂದರೆ ವಚನಗಳನ್ನು ಓದಿ ನಾವು ಕಲ್ಪಿಸಿಕೊಂಡ ಅಲ್ಲಮನ ಮಾತಿನ ರೀತಿಯದಲ್ಲ ಅನ್ನಿಸುತ್ತದೆ ಎಂದಷ್ಟೆ ಅರ್ಥ. ವಚನ ರಚನೆಯಾಗಿ ಮುನ್ನೂರು ವರ್ಷಗಳ ನಂತರದ ಹಸ್ತಪ್ರತಿಗಳಲ್ಲಿ ಸಿಗುವ ವಚನಗಳಲ್ಲಿ ಅಂಕಿತ ಬದಲಾಗಿಲ್ಲವೆಂದು ಹೇಳುವುದು ಹೇಗೆ! ಇದು ಇಂಥವರ ವಚನ ಅನ್ನುವುದು ಒಂದು ರೂಢಿಯಷ್ಟೆ, ಇನ್ನೇನೂ ಅಲ್ಲ. ವಚನಗಳು ಮನುಷ್ಯ ಮನಸ್ಸಿನ ಸಾಧ್ಯತೆಗಳ ಭಾಷಿಕ ರೂಪಗಳು. ಯಾರಾದರೂ ಹೇಳಿರಬೇಕಲ್ಲ ಅನ್ನುವುದಕ್ಕೆ ವಚನಕ್ಕೆ ಒಬ್ಬೊಬ್ಬ ವಚನಕಾರರನ್ನು ಕಲ್ಪಿಸಿಕೊಂಡು ಇವರ, ಅವರ ವಚನ ಎಂದು ವಾಗ್ವಾದ ಮಾಡುತ್ತಾ ವಚನಗಳನ್ನು ಮರೆತಿದ್ದೇವೆ.

ಇರಲಿ. ಮೇಲು ಮೇಲಿನ ತೋರಿಕೆಯನ್ನು ಮರೆತರೂ ಕೊನೆಯ ಸಾಲು ಕೂಡ ಅಕ್ಕ-ಅಲ್ಲಮ ಇವರಿಗೆ ಸಮಾನವಾದ ಧೋರಣೆಯನ್ನು ವ್ಯಕ್ತಪಡಿಸುತ್ತಿದೆ. ಕಣ್ಣಮೊದಲಿನಲ್ಲಿ ಇರುವವನ್ನು, (ಮತ್ತೆ ಯಾರು, ನೋಡುತ್ತಿರುವವನೇ ಅಲ್ಲವೆ!) ಹೊರಗೆ ಹುಡುಕಿ, ಹಾಗೆ ಹುಡುಕಿ ದಣಿದೆ ಅನ್ನುತ್ತಿದೆ ಈ ಸಾಲು. ದಣಿದ ಪರಿಯನ್ನು ಮೊದಲೆರಡು ಸಾಲುಗಳು ಹೇಳುತ್ತಿವೆ.

ತಾನು ಹುಡುಕುತ್ತಿರುವುದು ತನ್ನೊಳಗೇ ಇರುವುದನ್ನು ಅನ್ನುವ ನಿಲುವು ಅಕ್ಕನದೂ ಹೌದು. ಆದ್ದರಿಂದಲೇ `ನೀನೇಕೆ ಮುಖದೋರೆ’ ಎಂದು ಅಕ್ಕ ಕೂಡ ಅಲವತ್ತುಕೊಳ್ಳುವುದುಂಟು. ಬರಿಯ ಅಕ್ಕ ಅಲ್ಲಮ ಮಾತ್ರವಲ್ಲ ನಾವು ಕೂಡ ನಮ್ಮೊಳಗೆ ಬಿಂಬಿತವಾದದ್ದನ್ನೆ ಹೊರಗೆ ಕಾಣಲು ಯತ್ನಿಸುತ್ತ ದಣಿಯುವವರಲ್ಲವೇ? ಹಾಗಾಗಿ ಇಂಥ ವಚನಗಳು ನಮ್ಮ ಮಾತುಗಳೂ ಆಗುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...