Home / ಲೇಖನ / ಇತರೆ / ವಚನ ವಿಚಾರ – ಹುಡುಕಾಟ

ವಚನ ವಿಚಾರ – ಹುಡುಕಾಟ

ಅರಸಿ ಅರಸಿ ಹಾ ಹಾ ಎನುತಿದ್ದೆನು
ಬೆದಕಿ ಬೆದಕಿ ಬೆದಬೆದ ಬೇವುತಿದ್ದೆನು
ಗುಹೇಶ್ವರಾ ಕಣ್ಣ ಮೊದಲಲ್ಲಿದ್ದವನ ಕಾಣೆನು

ಅಲ್ಲಮನ ವಚನ. ಅಪರೂಪಕ್ಕೆಂಬಂತೆ ಅಕ್ಕನ ವಚನದ ರೀತಿಯಲ್ಲಿ ಭಾವ ತುಂಬಿಕೊಂಡ ವಚನವಾಗಿದೆ ಇದು. ಮೊದಲ ಎರಡು ಸಾಲುಗಳು ಅಕ್ಕನ ವಚನದಲ್ಲೂ ಬರಬಹುದಾದಂಥವು ಅನ್ನಿಸುತ್ತದೆ. ಗುಹೇಶ್ವರ ಅನ್ನುವುದರ ಬದಲಾಗಿ ಚನ್ನಮಲ್ಲಿಕಾರ್ಜುನ ಎಂದಿದ್ದರೆ ಅವಳ ವಚನವಲ್ಲ ಅನ್ನುವ ಧೈರ್ಯ ಯಾರಿಗೆ ಬಂದೀತು! ಹಾಗೆಂದರೆ ವಚನಗಳನ್ನು ಓದಿ ನಾವು ಕಲ್ಪಿಸಿಕೊಂಡ ಅಲ್ಲಮನ ಮಾತಿನ ರೀತಿಯದಲ್ಲ ಅನ್ನಿಸುತ್ತದೆ ಎಂದಷ್ಟೆ ಅರ್ಥ. ವಚನ ರಚನೆಯಾಗಿ ಮುನ್ನೂರು ವರ್ಷಗಳ ನಂತರದ ಹಸ್ತಪ್ರತಿಗಳಲ್ಲಿ ಸಿಗುವ ವಚನಗಳಲ್ಲಿ ಅಂಕಿತ ಬದಲಾಗಿಲ್ಲವೆಂದು ಹೇಳುವುದು ಹೇಗೆ! ಇದು ಇಂಥವರ ವಚನ ಅನ್ನುವುದು ಒಂದು ರೂಢಿಯಷ್ಟೆ, ಇನ್ನೇನೂ ಅಲ್ಲ. ವಚನಗಳು ಮನುಷ್ಯ ಮನಸ್ಸಿನ ಸಾಧ್ಯತೆಗಳ ಭಾಷಿಕ ರೂಪಗಳು. ಯಾರಾದರೂ ಹೇಳಿರಬೇಕಲ್ಲ ಅನ್ನುವುದಕ್ಕೆ ವಚನಕ್ಕೆ ಒಬ್ಬೊಬ್ಬ ವಚನಕಾರರನ್ನು ಕಲ್ಪಿಸಿಕೊಂಡು ಇವರ, ಅವರ ವಚನ ಎಂದು ವಾಗ್ವಾದ ಮಾಡುತ್ತಾ ವಚನಗಳನ್ನು ಮರೆತಿದ್ದೇವೆ.

ಇರಲಿ. ಮೇಲು ಮೇಲಿನ ತೋರಿಕೆಯನ್ನು ಮರೆತರೂ ಕೊನೆಯ ಸಾಲು ಕೂಡ ಅಕ್ಕ-ಅಲ್ಲಮ ಇವರಿಗೆ ಸಮಾನವಾದ ಧೋರಣೆಯನ್ನು ವ್ಯಕ್ತಪಡಿಸುತ್ತಿದೆ. ಕಣ್ಣಮೊದಲಿನಲ್ಲಿ ಇರುವವನ್ನು, (ಮತ್ತೆ ಯಾರು, ನೋಡುತ್ತಿರುವವನೇ ಅಲ್ಲವೆ!) ಹೊರಗೆ ಹುಡುಕಿ, ಹಾಗೆ ಹುಡುಕಿ ದಣಿದೆ ಅನ್ನುತ್ತಿದೆ ಈ ಸಾಲು. ದಣಿದ ಪರಿಯನ್ನು ಮೊದಲೆರಡು ಸಾಲುಗಳು ಹೇಳುತ್ತಿವೆ.

ತಾನು ಹುಡುಕುತ್ತಿರುವುದು ತನ್ನೊಳಗೇ ಇರುವುದನ್ನು ಅನ್ನುವ ನಿಲುವು ಅಕ್ಕನದೂ ಹೌದು. ಆದ್ದರಿಂದಲೇ `ನೀನೇಕೆ ಮುಖದೋರೆ’ ಎಂದು ಅಕ್ಕ ಕೂಡ ಅಲವತ್ತುಕೊಳ್ಳುವುದುಂಟು. ಬರಿಯ ಅಕ್ಕ ಅಲ್ಲಮ ಮಾತ್ರವಲ್ಲ ನಾವು ಕೂಡ ನಮ್ಮೊಳಗೆ ಬಿಂಬಿತವಾದದ್ದನ್ನೆ ಹೊರಗೆ ಕಾಣಲು ಯತ್ನಿಸುತ್ತ ದಣಿಯುವವರಲ್ಲವೇ? ಹಾಗಾಗಿ ಇಂಥ ವಚನಗಳು ನಮ್ಮ ಮಾತುಗಳೂ ಆಗುತ್ತವೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...