Home / ಲೇಖನ / ಇತರೆ / ವಚನ ವಿಚಾರ – ಹುಡುಕಾಟ

ವಚನ ವಿಚಾರ – ಹುಡುಕಾಟ

ಅರಸಿ ಅರಸಿ ಹಾ ಹಾ ಎನುತಿದ್ದೆನು
ಬೆದಕಿ ಬೆದಕಿ ಬೆದಬೆದ ಬೇವುತಿದ್ದೆನು
ಗುಹೇಶ್ವರಾ ಕಣ್ಣ ಮೊದಲಲ್ಲಿದ್ದವನ ಕಾಣೆನು

ಅಲ್ಲಮನ ವಚನ. ಅಪರೂಪಕ್ಕೆಂಬಂತೆ ಅಕ್ಕನ ವಚನದ ರೀತಿಯಲ್ಲಿ ಭಾವ ತುಂಬಿಕೊಂಡ ವಚನವಾಗಿದೆ ಇದು. ಮೊದಲ ಎರಡು ಸಾಲುಗಳು ಅಕ್ಕನ ವಚನದಲ್ಲೂ ಬರಬಹುದಾದಂಥವು ಅನ್ನಿಸುತ್ತದೆ. ಗುಹೇಶ್ವರ ಅನ್ನುವುದರ ಬದಲಾಗಿ ಚನ್ನಮಲ್ಲಿಕಾರ್ಜುನ ಎಂದಿದ್ದರೆ ಅವಳ ವಚನವಲ್ಲ ಅನ್ನುವ ಧೈರ್ಯ ಯಾರಿಗೆ ಬಂದೀತು! ಹಾಗೆಂದರೆ ವಚನಗಳನ್ನು ಓದಿ ನಾವು ಕಲ್ಪಿಸಿಕೊಂಡ ಅಲ್ಲಮನ ಮಾತಿನ ರೀತಿಯದಲ್ಲ ಅನ್ನಿಸುತ್ತದೆ ಎಂದಷ್ಟೆ ಅರ್ಥ. ವಚನ ರಚನೆಯಾಗಿ ಮುನ್ನೂರು ವರ್ಷಗಳ ನಂತರದ ಹಸ್ತಪ್ರತಿಗಳಲ್ಲಿ ಸಿಗುವ ವಚನಗಳಲ್ಲಿ ಅಂಕಿತ ಬದಲಾಗಿಲ್ಲವೆಂದು ಹೇಳುವುದು ಹೇಗೆ! ಇದು ಇಂಥವರ ವಚನ ಅನ್ನುವುದು ಒಂದು ರೂಢಿಯಷ್ಟೆ, ಇನ್ನೇನೂ ಅಲ್ಲ. ವಚನಗಳು ಮನುಷ್ಯ ಮನಸ್ಸಿನ ಸಾಧ್ಯತೆಗಳ ಭಾಷಿಕ ರೂಪಗಳು. ಯಾರಾದರೂ ಹೇಳಿರಬೇಕಲ್ಲ ಅನ್ನುವುದಕ್ಕೆ ವಚನಕ್ಕೆ ಒಬ್ಬೊಬ್ಬ ವಚನಕಾರರನ್ನು ಕಲ್ಪಿಸಿಕೊಂಡು ಇವರ, ಅವರ ವಚನ ಎಂದು ವಾಗ್ವಾದ ಮಾಡುತ್ತಾ ವಚನಗಳನ್ನು ಮರೆತಿದ್ದೇವೆ.

ಇರಲಿ. ಮೇಲು ಮೇಲಿನ ತೋರಿಕೆಯನ್ನು ಮರೆತರೂ ಕೊನೆಯ ಸಾಲು ಕೂಡ ಅಕ್ಕ-ಅಲ್ಲಮ ಇವರಿಗೆ ಸಮಾನವಾದ ಧೋರಣೆಯನ್ನು ವ್ಯಕ್ತಪಡಿಸುತ್ತಿದೆ. ಕಣ್ಣಮೊದಲಿನಲ್ಲಿ ಇರುವವನ್ನು, (ಮತ್ತೆ ಯಾರು, ನೋಡುತ್ತಿರುವವನೇ ಅಲ್ಲವೆ!) ಹೊರಗೆ ಹುಡುಕಿ, ಹಾಗೆ ಹುಡುಕಿ ದಣಿದೆ ಅನ್ನುತ್ತಿದೆ ಈ ಸಾಲು. ದಣಿದ ಪರಿಯನ್ನು ಮೊದಲೆರಡು ಸಾಲುಗಳು ಹೇಳುತ್ತಿವೆ.

ತಾನು ಹುಡುಕುತ್ತಿರುವುದು ತನ್ನೊಳಗೇ ಇರುವುದನ್ನು ಅನ್ನುವ ನಿಲುವು ಅಕ್ಕನದೂ ಹೌದು. ಆದ್ದರಿಂದಲೇ `ನೀನೇಕೆ ಮುಖದೋರೆ’ ಎಂದು ಅಕ್ಕ ಕೂಡ ಅಲವತ್ತುಕೊಳ್ಳುವುದುಂಟು. ಬರಿಯ ಅಕ್ಕ ಅಲ್ಲಮ ಮಾತ್ರವಲ್ಲ ನಾವು ಕೂಡ ನಮ್ಮೊಳಗೆ ಬಿಂಬಿತವಾದದ್ದನ್ನೆ ಹೊರಗೆ ಕಾಣಲು ಯತ್ನಿಸುತ್ತ ದಣಿಯುವವರಲ್ಲವೇ? ಹಾಗಾಗಿ ಇಂಥ ವಚನಗಳು ನಮ್ಮ ಮಾತುಗಳೂ ಆಗುತ್ತವೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...