Home / ಲೇಖನ / ಇತರೆ / ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ಅರಿಯಬಹುದು ಕುರುಹಿಡಬಾರದು
ಭಾವಿಸಬಹುದು ಬೆರೆಸಬಾರದು
ಕಾಣಬಹುದು ಕೈಗೆ ಸಿಲುಕದು
ಅಖಂಡ ನಿರಾಳವ ಕಪಿಲಸಿದ್ಧಮಲ್ಲಿಕಾರ್ಜುನಾ
ನಿಮ್ಮ ಶರಣರು ಬಲ್ಲರು

[ನಿರಾಳ-ನೆಮ್ಮದಿ, ಖಚಿತ, ಅವ್ಯಕ್ತ, ಆಕಾಶ]

ಸಿದ್ಧರಾಮನ ವಚನ. ಕಪಿಲಸಿದ್ಧಮಲ್ಲಿಕಾರ್ಜುನ ಅಖಂಡ-ಇಡಿಯಾದವನು. ಅವನು ನಿರಾಳ, ಅವನನ್ನು ಅರಿಯಬಹುದು, ಆದರೆ ಅರಿತದದ್ದನ್ನು ಒಂದು ಕುರುಹು, ಗುರುತು ಎಂದು ಇತರರಿಗೆ ಅರ್ಥವಾಗುವ ಕುರುಹಿನ ವ್ಯವಸ್ಥೆಗೆ ಒಳಪಡಿಸಲು ಆಗದು. ಅವನನ್ನು ಭಾವಿಸಿಕೊಳ್ಳಬಹುದು. ಆದರೆ ಅವನೊಡನೆ ಬೆರೆಯುವುದು ಆಗದು. ಅವನು ಕಾಣಬಹುದು, ಆದರೆ ಕೈಗೆ ಸಿಗುವುದು ಅಸಾಧ್ಯ.

ಮಾತು ಎಂಬ ಕುರುಹಿಗೆ ದಕ್ಕದ, ಭಾವನೆ ಮಾತ್ರವಾಗಿ ಉಳಿದು ಒಂದಾಗಲು ಅಸಾಧ್ಯವಾದ, ಕಾಣುವ ಆದರೆ ಕೈಗೆ ಸಿಗದ ದೇವರನ್ನು ಕುರುಹಿಗೆ, ಒಗ್ಗೂಡಿಕೆಗೆ, ಕೈಗೆಟುಕಿಸಿಕೊಳ್ಳುವುದಕ್ಕೆ ವ್ಯರ್ಥವಾಗಿ ಹಂಬಲಿಸದೆ ದೇವರು ಇದ್ದಂತೆಯೇ ಅವನಿಗೆ ಶರಣಾಗುವವರು ಮಾತ್ರ ಅವನನ್ನು ಬಲ್ಲರು.

ನಮಗೆ ಆಗುವ ಯಾವುದೇ ಅನುಭವವಾದರೂ ಅಷ್ಟೆ. ಅದಕ್ಕೆ ಸಂಪೂರ್ಣ ಶರಣಾಗದೆ ಅದು ನಮ್ಮದಾಗದು. ದುರಂತವೆಂದರೆ ನಮಗೆ ಅನುಭವವಾಗುತ್ತಿರುವ ಕ್ಷಣದಲ್ಲೇ ಅದಕ್ಕೆ ಇತರರಿಗೆ ಅರ್ಥವಾಗಬಲ್ಲ, ನಮ್ಮ ಕೈಗೆ ವಶವಾಗಬಲ್ಲ ರೂಪ ಕೊಡುವುದರಲ್ಲಿ ತೊಡಗಿರುತ್ತೇವೆ. ಇದು ಶರಣಗುಣವಲ್ಲ, ಕಪಿಲಸಿದ್ಧಮಲ್ಲಿಕಾರ್ಜುನ ನಮ್ಮವನಾಗಲಾರ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...