Home / ಲೇಖನ / ಇತರೆ / ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ಅರಿಯಬಹುದು ಕುರುಹಿಡಬಾರದು
ಭಾವಿಸಬಹುದು ಬೆರೆಸಬಾರದು
ಕಾಣಬಹುದು ಕೈಗೆ ಸಿಲುಕದು
ಅಖಂಡ ನಿರಾಳವ ಕಪಿಲಸಿದ್ಧಮಲ್ಲಿಕಾರ್ಜುನಾ
ನಿಮ್ಮ ಶರಣರು ಬಲ್ಲರು

[ನಿರಾಳ-ನೆಮ್ಮದಿ, ಖಚಿತ, ಅವ್ಯಕ್ತ, ಆಕಾಶ]

ಸಿದ್ಧರಾಮನ ವಚನ. ಕಪಿಲಸಿದ್ಧಮಲ್ಲಿಕಾರ್ಜುನ ಅಖಂಡ-ಇಡಿಯಾದವನು. ಅವನು ನಿರಾಳ, ಅವನನ್ನು ಅರಿಯಬಹುದು, ಆದರೆ ಅರಿತದದ್ದನ್ನು ಒಂದು ಕುರುಹು, ಗುರುತು ಎಂದು ಇತರರಿಗೆ ಅರ್ಥವಾಗುವ ಕುರುಹಿನ ವ್ಯವಸ್ಥೆಗೆ ಒಳಪಡಿಸಲು ಆಗದು. ಅವನನ್ನು ಭಾವಿಸಿಕೊಳ್ಳಬಹುದು. ಆದರೆ ಅವನೊಡನೆ ಬೆರೆಯುವುದು ಆಗದು. ಅವನು ಕಾಣಬಹುದು, ಆದರೆ ಕೈಗೆ ಸಿಗುವುದು ಅಸಾಧ್ಯ.

ಮಾತು ಎಂಬ ಕುರುಹಿಗೆ ದಕ್ಕದ, ಭಾವನೆ ಮಾತ್ರವಾಗಿ ಉಳಿದು ಒಂದಾಗಲು ಅಸಾಧ್ಯವಾದ, ಕಾಣುವ ಆದರೆ ಕೈಗೆ ಸಿಗದ ದೇವರನ್ನು ಕುರುಹಿಗೆ, ಒಗ್ಗೂಡಿಕೆಗೆ, ಕೈಗೆಟುಕಿಸಿಕೊಳ್ಳುವುದಕ್ಕೆ ವ್ಯರ್ಥವಾಗಿ ಹಂಬಲಿಸದೆ ದೇವರು ಇದ್ದಂತೆಯೇ ಅವನಿಗೆ ಶರಣಾಗುವವರು ಮಾತ್ರ ಅವನನ್ನು ಬಲ್ಲರು.

ನಮಗೆ ಆಗುವ ಯಾವುದೇ ಅನುಭವವಾದರೂ ಅಷ್ಟೆ. ಅದಕ್ಕೆ ಸಂಪೂರ್ಣ ಶರಣಾಗದೆ ಅದು ನಮ್ಮದಾಗದು. ದುರಂತವೆಂದರೆ ನಮಗೆ ಅನುಭವವಾಗುತ್ತಿರುವ ಕ್ಷಣದಲ್ಲೇ ಅದಕ್ಕೆ ಇತರರಿಗೆ ಅರ್ಥವಾಗಬಲ್ಲ, ನಮ್ಮ ಕೈಗೆ ವಶವಾಗಬಲ್ಲ ರೂಪ ಕೊಡುವುದರಲ್ಲಿ ತೊಡಗಿರುತ್ತೇವೆ. ಇದು ಶರಣಗುಣವಲ್ಲ, ಕಪಿಲಸಿದ್ಧಮಲ್ಲಿಕಾರ್ಜುನ ನಮ್ಮವನಾಗಲಾರ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...