Home / ಲೇಖನ / ಇತರೆ / ವಚನ ವಿಚಾರ – ಅಸಾಧ್ಯ

ವಚನ ವಿಚಾರ – ಅಸಾಧ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು

[ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು]

ಘಟ್ಟಿವಾಳಯ್ಯನ ವಚನ. ಈ ವಚನ ಅರಿವನ್ನು ಕುರಿತ ನಮ್ಮ ಕಲ್ಪನೆಗಳನ್ನೆಲ್ಲ ಪ್ರಶ್ನಿಸುತ್ತಿದೆ.

ಅರಿವು ಅನ್ನುವುದು ನೆನಪಿಗೆ ಕೂಡ ಸಂಬಂಧಿಸಿದ್ದು ಎಂದುಕೊಂಡಿದ್ದೇವೆ. ನಮ್ಮ ಇಡೀ ಶಿಕ್ಷಣ, ಸಂಸ್ಕೃತಿ ಎಲ್ಲವೂ ನೆನಪಿಗೆ ಸಂಬಂಧಿಸಿದ್ದು, ನೆನಪನ್ನೇ ಆಧರಿಸಿದ್ದು ಅಲ್ಲವೇ? ಆದರೆ ಸತ್ಯ ಅನ್ನುವುದು ಇದ್ದರೆ ಅದು ನೆನಪಿಗೆ ಸಿಲುಕದು. ಅರಿವಿಗೆ ಸಿಲುಕದು. ಅರಿವಿಗೆ ಬಾರದಿರುವ ಸತ್ಯ ನೆನಪಿಗೆ ಬರುತ್ತದೆಯೇ? ನೆನಪಿಗೆ ಬರುವುದೇನಿದ್ದರೂ ನಮ್ಮ ಹಳೆಯ ಅನುಭವ, ಕೇಳಿದ ಮಾತು ಇಂಥವೇ ಅಲ್ಲವೇ? ಯಾವುದು ನಮ್ಮ ನೆನಪಿನಲ್ಲಿ ದಾಖಲಾಗಿದೆಯೋ ಅದನ್ನು ಮಾತ್ರ ನಾವು ಈಗ ಗುರುತಿಸುತ್ತೇವೆ. ಯಾವುದು ನೆನಪಿಗೆ ಬಾರದೋ ಅದು ನಮಗೆ ಕಾಣುವುದೂ ಇಲ್ಲ. ನೆನಪನ್ನೇ ಆಧರಿಸಿಕೊಂಡಿರುವ ನಮ್ಮ ಕಾಣ್ಕೆ, ನಮ್ಮ ಅರಿವು ಸತ್ಯವನ್ನು ಕಾಣಿಸಿಕೊಡಲಾಗದು. ಹೀಗಿರುವಾಗ ಮಾತಿಗೆ ಸಿಲುಕದ, ನೆನಪಿಗೆ ಆಹಾರವಾಗದ ಸತ್ಯವನ್ನೋ ದೇವರನ್ನೋ ಮುಟ್ಟುವುದು ಪೂಜಿಸುವುದು ಅಸಾಧ್ಯ ಅನ್ನುತ್ತಾನೆ ಘಟ್ಟಿವಾಳಯ್ಯ.

ನಡುಗನ್ನಡದಲ್ಲಿ ನೆನೆ ಎಂಬ ಮಾತನ್ನು ಧ್ಯಾನಿಸು ಅನ್ನುವ ಅರ್ಥದಲ್ಲಿ ಬಳಸುವುದುಂಟು. ಧ್ಯಾನಿಸುವುದು ಏನಿದ್ದರೂ ನಮಗೆ ಗೊತ್ತಿರುವ, ನಮ್ಮ ಗ್ರಹಿಕೆಗೆ ಬಂದಿರುವ, ಧ್ಯಾನಿಸಬಲ್ಲ ಸಂಗತಿಗಳನ್ನು ಮಾತ್ರವೇ.

ಇಂಗ್ಲೀಶ್‌ನ ರಿಕಾಗ್ನಿಶನ್ ಎಂಬ ಮಾತು ನೆನೆದುಕೊಳ್ಳೋಣ. ಅದು ರಿ (ಮತ್ತೆ) ಕಾಗ್ನಿಶನ್ (ಗ್ರಹಿಸುವುದು, ಗುರುತಿಸುವುದು). ನಮ್ಮ ಜ್ಞಾನದ ಕಲ್ಪನೆ, ಅರಿವಿನ ಕಲ್ಪನೆ ಎಲ್ಲವೂ ನೆನಪನ್ನು ಮಾತ್ರ ಆಧರಿಸಿದ್ದು, ಅದರಂತೆ ನಾವು ಈ ಮೊದಲು ದೇವರನ್ನು, ಸತ್ಯವನ್ನು ಕಂಡಿಲ್ಲವಾದರೆ, ಕಂಡ ನೆನಪು ನಮ್ಮಲ್ಲಿಲ್ಲವಾದರೆ ಈಗ ಒಂದು ವೇಳೆ ದೇವರು, ಸತ್ಯ ನಮ್ಮ ಕಣ್ಣೆದುರಿಗೇ ಇದ್ದರೂ ಗುರುತಿಸಲಾರೆವು. ಹೀಗಿರುವಾಗ ನಾನು ಸತ್ಯವನ್ನು ಕಂಡೆ, ದೇವರನ್ನು ಕಂಡೆ ಅನ್ನುವ ಮಾತುಗಳೇ ಸರಿಯಲ್ಲ, ಅದು ಅಸಾಧ್ಯ ಅನ್ನುತ್ತಿರುವಂತಿದೆ ಘಟ್ಟಿವಾಳಯ್ಯ.
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...