Home / ಲೇಖನ / ಇತರೆ / ವಚನ ವಿಚಾರ – ಅಸಾಧ್ಯ

ವಚನ ವಿಚಾರ – ಅಸಾಧ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು

[ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು]

ಘಟ್ಟಿವಾಳಯ್ಯನ ವಚನ. ಈ ವಚನ ಅರಿವನ್ನು ಕುರಿತ ನಮ್ಮ ಕಲ್ಪನೆಗಳನ್ನೆಲ್ಲ ಪ್ರಶ್ನಿಸುತ್ತಿದೆ.

ಅರಿವು ಅನ್ನುವುದು ನೆನಪಿಗೆ ಕೂಡ ಸಂಬಂಧಿಸಿದ್ದು ಎಂದುಕೊಂಡಿದ್ದೇವೆ. ನಮ್ಮ ಇಡೀ ಶಿಕ್ಷಣ, ಸಂಸ್ಕೃತಿ ಎಲ್ಲವೂ ನೆನಪಿಗೆ ಸಂಬಂಧಿಸಿದ್ದು, ನೆನಪನ್ನೇ ಆಧರಿಸಿದ್ದು ಅಲ್ಲವೇ? ಆದರೆ ಸತ್ಯ ಅನ್ನುವುದು ಇದ್ದರೆ ಅದು ನೆನಪಿಗೆ ಸಿಲುಕದು. ಅರಿವಿಗೆ ಸಿಲುಕದು. ಅರಿವಿಗೆ ಬಾರದಿರುವ ಸತ್ಯ ನೆನಪಿಗೆ ಬರುತ್ತದೆಯೇ? ನೆನಪಿಗೆ ಬರುವುದೇನಿದ್ದರೂ ನಮ್ಮ ಹಳೆಯ ಅನುಭವ, ಕೇಳಿದ ಮಾತು ಇಂಥವೇ ಅಲ್ಲವೇ? ಯಾವುದು ನಮ್ಮ ನೆನಪಿನಲ್ಲಿ ದಾಖಲಾಗಿದೆಯೋ ಅದನ್ನು ಮಾತ್ರ ನಾವು ಈಗ ಗುರುತಿಸುತ್ತೇವೆ. ಯಾವುದು ನೆನಪಿಗೆ ಬಾರದೋ ಅದು ನಮಗೆ ಕಾಣುವುದೂ ಇಲ್ಲ. ನೆನಪನ್ನೇ ಆಧರಿಸಿಕೊಂಡಿರುವ ನಮ್ಮ ಕಾಣ್ಕೆ, ನಮ್ಮ ಅರಿವು ಸತ್ಯವನ್ನು ಕಾಣಿಸಿಕೊಡಲಾಗದು. ಹೀಗಿರುವಾಗ ಮಾತಿಗೆ ಸಿಲುಕದ, ನೆನಪಿಗೆ ಆಹಾರವಾಗದ ಸತ್ಯವನ್ನೋ ದೇವರನ್ನೋ ಮುಟ್ಟುವುದು ಪೂಜಿಸುವುದು ಅಸಾಧ್ಯ ಅನ್ನುತ್ತಾನೆ ಘಟ್ಟಿವಾಳಯ್ಯ.

ನಡುಗನ್ನಡದಲ್ಲಿ ನೆನೆ ಎಂಬ ಮಾತನ್ನು ಧ್ಯಾನಿಸು ಅನ್ನುವ ಅರ್ಥದಲ್ಲಿ ಬಳಸುವುದುಂಟು. ಧ್ಯಾನಿಸುವುದು ಏನಿದ್ದರೂ ನಮಗೆ ಗೊತ್ತಿರುವ, ನಮ್ಮ ಗ್ರಹಿಕೆಗೆ ಬಂದಿರುವ, ಧ್ಯಾನಿಸಬಲ್ಲ ಸಂಗತಿಗಳನ್ನು ಮಾತ್ರವೇ.

ಇಂಗ್ಲೀಶ್‌ನ ರಿಕಾಗ್ನಿಶನ್ ಎಂಬ ಮಾತು ನೆನೆದುಕೊಳ್ಳೋಣ. ಅದು ರಿ (ಮತ್ತೆ) ಕಾಗ್ನಿಶನ್ (ಗ್ರಹಿಸುವುದು, ಗುರುತಿಸುವುದು). ನಮ್ಮ ಜ್ಞಾನದ ಕಲ್ಪನೆ, ಅರಿವಿನ ಕಲ್ಪನೆ ಎಲ್ಲವೂ ನೆನಪನ್ನು ಮಾತ್ರ ಆಧರಿಸಿದ್ದು, ಅದರಂತೆ ನಾವು ಈ ಮೊದಲು ದೇವರನ್ನು, ಸತ್ಯವನ್ನು ಕಂಡಿಲ್ಲವಾದರೆ, ಕಂಡ ನೆನಪು ನಮ್ಮಲ್ಲಿಲ್ಲವಾದರೆ ಈಗ ಒಂದು ವೇಳೆ ದೇವರು, ಸತ್ಯ ನಮ್ಮ ಕಣ್ಣೆದುರಿಗೇ ಇದ್ದರೂ ಗುರುತಿಸಲಾರೆವು. ಹೀಗಿರುವಾಗ ನಾನು ಸತ್ಯವನ್ನು ಕಂಡೆ, ದೇವರನ್ನು ಕಂಡೆ ಅನ್ನುವ ಮಾತುಗಳೇ ಸರಿಯಲ್ಲ, ಅದು ಅಸಾಧ್ಯ ಅನ್ನುತ್ತಿರುವಂತಿದೆ ಘಟ್ಟಿವಾಳಯ್ಯ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...