Home / ಲೇಖನ / ಇತರೆ / ವಚನ ವಿಚಾರ – ಅಸಾಧ್ಯ

ವಚನ ವಿಚಾರ – ಅಸಾಧ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು

[ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು]

ಘಟ್ಟಿವಾಳಯ್ಯನ ವಚನ. ಈ ವಚನ ಅರಿವನ್ನು ಕುರಿತ ನಮ್ಮ ಕಲ್ಪನೆಗಳನ್ನೆಲ್ಲ ಪ್ರಶ್ನಿಸುತ್ತಿದೆ.

ಅರಿವು ಅನ್ನುವುದು ನೆನಪಿಗೆ ಕೂಡ ಸಂಬಂಧಿಸಿದ್ದು ಎಂದುಕೊಂಡಿದ್ದೇವೆ. ನಮ್ಮ ಇಡೀ ಶಿಕ್ಷಣ, ಸಂಸ್ಕೃತಿ ಎಲ್ಲವೂ ನೆನಪಿಗೆ ಸಂಬಂಧಿಸಿದ್ದು, ನೆನಪನ್ನೇ ಆಧರಿಸಿದ್ದು ಅಲ್ಲವೇ? ಆದರೆ ಸತ್ಯ ಅನ್ನುವುದು ಇದ್ದರೆ ಅದು ನೆನಪಿಗೆ ಸಿಲುಕದು. ಅರಿವಿಗೆ ಸಿಲುಕದು. ಅರಿವಿಗೆ ಬಾರದಿರುವ ಸತ್ಯ ನೆನಪಿಗೆ ಬರುತ್ತದೆಯೇ? ನೆನಪಿಗೆ ಬರುವುದೇನಿದ್ದರೂ ನಮ್ಮ ಹಳೆಯ ಅನುಭವ, ಕೇಳಿದ ಮಾತು ಇಂಥವೇ ಅಲ್ಲವೇ? ಯಾವುದು ನಮ್ಮ ನೆನಪಿನಲ್ಲಿ ದಾಖಲಾಗಿದೆಯೋ ಅದನ್ನು ಮಾತ್ರ ನಾವು ಈಗ ಗುರುತಿಸುತ್ತೇವೆ. ಯಾವುದು ನೆನಪಿಗೆ ಬಾರದೋ ಅದು ನಮಗೆ ಕಾಣುವುದೂ ಇಲ್ಲ. ನೆನಪನ್ನೇ ಆಧರಿಸಿಕೊಂಡಿರುವ ನಮ್ಮ ಕಾಣ್ಕೆ, ನಮ್ಮ ಅರಿವು ಸತ್ಯವನ್ನು ಕಾಣಿಸಿಕೊಡಲಾಗದು. ಹೀಗಿರುವಾಗ ಮಾತಿಗೆ ಸಿಲುಕದ, ನೆನಪಿಗೆ ಆಹಾರವಾಗದ ಸತ್ಯವನ್ನೋ ದೇವರನ್ನೋ ಮುಟ್ಟುವುದು ಪೂಜಿಸುವುದು ಅಸಾಧ್ಯ ಅನ್ನುತ್ತಾನೆ ಘಟ್ಟಿವಾಳಯ್ಯ.

ನಡುಗನ್ನಡದಲ್ಲಿ ನೆನೆ ಎಂಬ ಮಾತನ್ನು ಧ್ಯಾನಿಸು ಅನ್ನುವ ಅರ್ಥದಲ್ಲಿ ಬಳಸುವುದುಂಟು. ಧ್ಯಾನಿಸುವುದು ಏನಿದ್ದರೂ ನಮಗೆ ಗೊತ್ತಿರುವ, ನಮ್ಮ ಗ್ರಹಿಕೆಗೆ ಬಂದಿರುವ, ಧ್ಯಾನಿಸಬಲ್ಲ ಸಂಗತಿಗಳನ್ನು ಮಾತ್ರವೇ.

ಇಂಗ್ಲೀಶ್‌ನ ರಿಕಾಗ್ನಿಶನ್ ಎಂಬ ಮಾತು ನೆನೆದುಕೊಳ್ಳೋಣ. ಅದು ರಿ (ಮತ್ತೆ) ಕಾಗ್ನಿಶನ್ (ಗ್ರಹಿಸುವುದು, ಗುರುತಿಸುವುದು). ನಮ್ಮ ಜ್ಞಾನದ ಕಲ್ಪನೆ, ಅರಿವಿನ ಕಲ್ಪನೆ ಎಲ್ಲವೂ ನೆನಪನ್ನು ಮಾತ್ರ ಆಧರಿಸಿದ್ದು, ಅದರಂತೆ ನಾವು ಈ ಮೊದಲು ದೇವರನ್ನು, ಸತ್ಯವನ್ನು ಕಂಡಿಲ್ಲವಾದರೆ, ಕಂಡ ನೆನಪು ನಮ್ಮಲ್ಲಿಲ್ಲವಾದರೆ ಈಗ ಒಂದು ವೇಳೆ ದೇವರು, ಸತ್ಯ ನಮ್ಮ ಕಣ್ಣೆದುರಿಗೇ ಇದ್ದರೂ ಗುರುತಿಸಲಾರೆವು. ಹೀಗಿರುವಾಗ ನಾನು ಸತ್ಯವನ್ನು ಕಂಡೆ, ದೇವರನ್ನು ಕಂಡೆ ಅನ್ನುವ ಮಾತುಗಳೇ ಸರಿಯಲ್ಲ, ಅದು ಅಸಾಧ್ಯ ಅನ್ನುತ್ತಿರುವಂತಿದೆ ಘಟ್ಟಿವಾಳಯ್ಯ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...