Home / ಲೇಖನ / ಇತರೆ / ವಚನ ವಿಚಾರ – ಸೋಂಕಿನ ಸೋಜಿಗ

ವಚನ ವಿಚಾರ – ಸೋಂಕಿನ ಸೋಜಿಗ

ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು
ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು
ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು
ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು
ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು
ಡಂಬಕವ ನುಡಿದಹೆವೆಂಬ ಉದ್ದಂಡರ ಗುಹೇಶ್ವರ ಕಂಡರೆ ಕನಲುವ

[ಬರುಮಾತಿನ–ಬರಿಯ ಮಾತಿನ, ಕಾಯನಿರ್ಣಯ ನಿಃಪತಿ-ಪೂರ್ಣಪ್ರಬುದ್ಧತೆಯ ಲಕ್ಷಣ]

ಅಲ್ಲಮನ ವಚನ.

ಕೆಲವರಿಗೆ ಜ್ಞಾನದ ಬಲ ಇರುತ್ತದೆ. ಅದನ್ನು ಬಳಸಿಕೊಂಡು ಅರಿಯದವರನ್ನು ಗೆಲ್ಲಬೇಕೆಂದು ಇನ್ನಿಲ್ಲದಂತೆ ಪ್ರಯತ್ನಿಸುತ್ತಾರೆ. ಮಾತಿನ ಉಯ್ಯಾಲೆಯನ್ನು ಏರಿ ಅತ್ತ ಇತ್ತ ತುಯ್ದಾಡುತ್ತಾರೆ, ಒಮ್ಮೆ ಹಾಗೆ, ಒಮ್ಮೆ ಹೀಗೆ ಅಭಿಪ್ರಾಯವ್ಯಕ್ತಪಡಿಸುತ್ತಾರೆ. ಇವರೆಲ್ಲ (ನಾವೆಲ್ಲ?) ಹೀಗೆ ಸುಮ್ಮನೆ ಮಾತು ಒರಲಿ ಕೆಡುವ ದರಿದ್ರರು.

ಮುಂದಿನ ಕೆಲವು ಪಾರಿಭಾಷಿಕಗಳನ್ನು ಬಿಟ್ಟರೂ `ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು’ ಅನ್ನುವ ಮಾತು ಗಮನಿಸಿ, ಸ್ಪರ್ಶದ ಸೋಜಿಗವನ್ನು ಅನುಭವಿಸಿ, ಪರಿಣತರಾಗಿ ಫಲಿಸಬೇಕು.

ನಾವಾಡುವ ವಿಷಯವೆಲ್ಲ ಬರಿಯ ಮಾತಿನ ಮಟ್ಟದ ಮಾಹಿತಿಯಾಗಿದ್ದರೆ ನಾವೆಲ್ಲ ಮಾತಿನ ಉಯ್ಯಾಲೆಯಾಡುವ, ಅನ್ಯರನ್ನು ಗೆಲ್ಲಬಯಸುವ, ಕೆಡುವ, ದರಿದ್ರರು ಅಷ್ಟೆ. ಆಡುವ ಮಾತಿನ ನಿಜವನ್ನು ಮುಟ್ಟಿ, ಸೋಂಕಿ, ಸೋಜಿಗಪಡುವುದು ಮುಖ್ಯ. ಸೋಜಿಗ ಫಲಿಸುವುದು, ಹಣ್ಣಾಗುವುದು ಮುಖ್ಯ. ಅದು ಆಗದಿದ್ದರೆ ಮಾತು ವ್ಯರ್ಥ.

ಇನ್ನು ಮಾತು ಬೇಡ, ಸುಮ್ಮನೆ ಪರಿಣಮಿಸೋಣ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...