Home / ಲೇಖನ / ಇತರೆ / ವಚನ ವಿಚಾರ – ನಿಜವೇ?

ವಚನ ವಿಚಾರ – ನಿಜವೇ?

ಅರ್ಥ ಸನ್ಯಾಸಿ ಬ್ರಹ್ಮಚಾರಿ ಆನಯ್ಯ
ದೊರೆಕೊಳ್ಳದಿರ್ದಡೆ ಒಲ್ಲೆನೆಂಬೆನು
ದಿಟಕ್ಕೆ ಬಂದರೆ ಪರಿಹರಿಸಲರಿಯೆನು
ಎನಗೆ ನಿಸ್ಪೃಹದ ದೆಸೆಯನೆಂದಿಂಗೀವೆಯಯ್ಯಾ
ಸಕಳೇಶ್ವರದೇವಾ

[ನಿಸ್ಪೃಹ-ಆಸೆ ಇರದ; ತೃಪ್ತ; ಸಮಚಿತ್ತ]

ಸಕಳೇಶಮಾದರಸನ ವಚನ. ನಿಸ್ಪೃಹತೆಯ ಪ್ರಶ್ನೆಯನ್ನು ನಮ್ಮ ಮುಂದೆ ಒಡ್ಡುತ್ತದೆ ಈ ವಚನ. ದುಡ್ಡಿಲ್ಲದಿದ್ದಾಗ, ಹೆಣ್ಣು ದೊರೆಯದಿದ್ದಾಗ ಸನ್ಯಾಸಿ, ವಿರಕ್ತ, ಅಂದುಕೊಳ್ಳುವುದು ಸುಲಭ. ಸಿಗದಿರುವಾಗ ಬೇಡ ಅನ್ನುವುದು ಕಷ್ಟವಲ್ಲವೇ ಅಲ್ಲ. ಆದರೆ ಯಾವುದು ಬೇಡ ಅನ್ನುತ್ತೇನೋ ಅದು ನಿಜವಾಗಿಯೂ ಎದುರಿಗೆ ಬಂದಾಗ ಪರಿಹರಿಸಲು ಆಗದೆ ತಳಮಳಕ್ಕೆ ಒಳಗಾಗುತ್ತೇನೆ. ನನ್ನ ಮನಸ್ಸಿಗೆ ನಿಸ್ಪೃಹತೆಯ ದೆಸೆಯನ್ನು ಯಾವಾಗ ಕೊಡುತ್ತೀಯೆ ದೇವರೇ ಎಂದು ವಚನಕಾರ ಬೇಡುತ್ತಿದ್ದಾನೆ.

ನಮ್ಮ ನಮ್ಮ ವ್ಯಕ್ತಿತ್ವದ ಬಗ್ಗೆ ಆಕರ್ಷಕ ಕಲ್ಪನೆಗಳನ್ನಿಟ್ಟುಕೊಂಡು ಭ್ರಮೆಗೆ ಒಳಗಾಗುವುದು ಸುಲಭ. ಆದರೆ ದಿಟಕ್ಕೂ ನಮಗೆದುರಾಗುವ ಪ್ರಲೋಭನೆಗಳನ್ನು ಗೆಲಲ್ಲಾಗದು ಎಂಬ ಮನುಷ್ಯ ಸಹಜವಾದ ದೌರ್ಬಲ್ಯವನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತಿದ್ದಾನೆ ಸಕಳೇಶ ಮಾದರಸ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...