Home / ಲೇಖನ / ಇತರೆ / ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ಅವರಾರ ಪರಿಯಲ್ಲ ಎಮ್ಮ ನಲ್ಲನು
ವಿಶ್ವವೆಲ್ಲ ಸತಿಯರು
ಸೋಜಿಗದ ಪುರುಷನು
ಅವರವರ ಪರಿಯಲ್ಲೆ ನೆರೆವನು
ಅವರಿಗವರಂತೆ ಸುಖಮಯನು ನೋಡಾ
ಅವರೆಲ್ಲರ ವಂಚಿಸಿ ಎನ್ನನಗಲದ ಪರಿಯ ನೋಡಾ
ಕೆಳದಿ
ನೀನೊಳ್ಳಿದಳಾದಡೆ
ಮಹಾಮಂತ್ರವ ಜಪಿಸು
ನಿನ್ನನಗಲನು
ನಿನ್ನಾಣೆ
ಉರಿಲಿಂಗದೇವ
ತನ್ನಾಣೆ ಕೆಳದಿ

[ನೆರೆವನು-ಕೂಡುವನು, ನೀನೊಳ್ಳಿದಳಾದಡೆ-ನೀನು ಒಳ್ಳೆಯವಳಾಗಿದ್ದರೆ]

ಉರಿಲಿಂಗದೇವನ ವಚನ. ನನ್ನ ಗಂಡ ಮಿಕ್ಕವರ ಗಂಡನಂತೆ ಅಲ್ಲ. ಇಡೀ ವಿಶ್ವವೇ ಅವನ ಹೆಂಡಿರು. ಅವರವರಿಗೆ ಬೇಕಾದಂತೆ ಅವರವರೊಡನೆ ಇರುತ್ತಾನೆ. ಅವರವರಿಗೆ ತಕ್ಕಂತೆ ಸುಖ ಕೊಡುತ್ತಾನೆ. ಆದರೆ ವಿಚಿತ್ರವೆಂದರೆ ಅವನಿಗೆ ನನ್ನ ಮೇಲೆ ತುಂಬ ಪ್ರೀತಿ, ಮಿಕ್ಕವರನ್ನೆಲ್ಲ ವಂಚಿಸಿ ನನ್ನೊಡನೆ ಇದ್ದಾನೆ. ನನ್ನನ್ನು ಬಿಟ್ಟು ಅಗಲುವುದಿಲ್ಲ. ನೀನು ಒಳ್ಳೆಯವಳಾದರೆ ಮಹಾಮಂತ್ರವನ್ನು ಜಪಿಸು. ಅವನು ನಿನ್ನೊಡನೆಯೇ ಇರುವಂತಾಗುತ್ತದೆ, ನಿನ್ನನ್ನು ಬಿಟ್ಟು ಹೋಗದಂತಾಗುತ್ತದೆ.

ದೈವವು ಇಷ್ಟದೈವವಾಗುವ ಪರಿ ಈ ವಚನದಲ್ಲಿದೆ. ರಾಸಲೀಲೆಯಾಡುವಾಗ ಕೃಷ್ಣ ಎಲ್ಲ ಗೋಪಿಕೆಯರೊಡನೆಯೂ ಇರುತ್ತಿದ್ದನಂತಲ್ಲ, ಹಾಗೆಯೇ ಇದು. ಇಡೀ ವಿಶ್ವಕ್ಕೆ ದೈವವಾದವನು, ನನ್ನೊಬ್ಬಳ ಸ್ವಂತವಾಗುವ ವೈಚಿತ್ರ್ಯ ಅಚ್ಚರಿಗೆ ಕಾರಣವಾಗಿದೆ. ಇದು ಅವನನ್ನು ಪತಿಯಾಗಿ ಪಡೆಯಬಯಸುವ ಎಲ್ಲರಿಗೂ ಸಾಧ್ಯ ಅನ್ನುತ್ತದೆ ಉರಿಲಿಂಗದೇವನ ಈ ವಚನ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...