Home / ಲೇಖನ / ಇತರೆ / ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ಅವರಾರ ಪರಿಯಲ್ಲ ಎಮ್ಮ ನಲ್ಲನು
ವಿಶ್ವವೆಲ್ಲ ಸತಿಯರು
ಸೋಜಿಗದ ಪುರುಷನು
ಅವರವರ ಪರಿಯಲ್ಲೆ ನೆರೆವನು
ಅವರಿಗವರಂತೆ ಸುಖಮಯನು ನೋಡಾ
ಅವರೆಲ್ಲರ ವಂಚಿಸಿ ಎನ್ನನಗಲದ ಪರಿಯ ನೋಡಾ
ಕೆಳದಿ
ನೀನೊಳ್ಳಿದಳಾದಡೆ
ಮಹಾಮಂತ್ರವ ಜಪಿಸು
ನಿನ್ನನಗಲನು
ನಿನ್ನಾಣೆ
ಉರಿಲಿಂಗದೇವ
ತನ್ನಾಣೆ ಕೆಳದಿ

[ನೆರೆವನು-ಕೂಡುವನು, ನೀನೊಳ್ಳಿದಳಾದಡೆ-ನೀನು ಒಳ್ಳೆಯವಳಾಗಿದ್ದರೆ]

ಉರಿಲಿಂಗದೇವನ ವಚನ. ನನ್ನ ಗಂಡ ಮಿಕ್ಕವರ ಗಂಡನಂತೆ ಅಲ್ಲ. ಇಡೀ ವಿಶ್ವವೇ ಅವನ ಹೆಂಡಿರು. ಅವರವರಿಗೆ ಬೇಕಾದಂತೆ ಅವರವರೊಡನೆ ಇರುತ್ತಾನೆ. ಅವರವರಿಗೆ ತಕ್ಕಂತೆ ಸುಖ ಕೊಡುತ್ತಾನೆ. ಆದರೆ ವಿಚಿತ್ರವೆಂದರೆ ಅವನಿಗೆ ನನ್ನ ಮೇಲೆ ತುಂಬ ಪ್ರೀತಿ, ಮಿಕ್ಕವರನ್ನೆಲ್ಲ ವಂಚಿಸಿ ನನ್ನೊಡನೆ ಇದ್ದಾನೆ. ನನ್ನನ್ನು ಬಿಟ್ಟು ಅಗಲುವುದಿಲ್ಲ. ನೀನು ಒಳ್ಳೆಯವಳಾದರೆ ಮಹಾಮಂತ್ರವನ್ನು ಜಪಿಸು. ಅವನು ನಿನ್ನೊಡನೆಯೇ ಇರುವಂತಾಗುತ್ತದೆ, ನಿನ್ನನ್ನು ಬಿಟ್ಟು ಹೋಗದಂತಾಗುತ್ತದೆ.

ದೈವವು ಇಷ್ಟದೈವವಾಗುವ ಪರಿ ಈ ವಚನದಲ್ಲಿದೆ. ರಾಸಲೀಲೆಯಾಡುವಾಗ ಕೃಷ್ಣ ಎಲ್ಲ ಗೋಪಿಕೆಯರೊಡನೆಯೂ ಇರುತ್ತಿದ್ದನಂತಲ್ಲ, ಹಾಗೆಯೇ ಇದು. ಇಡೀ ವಿಶ್ವಕ್ಕೆ ದೈವವಾದವನು, ನನ್ನೊಬ್ಬಳ ಸ್ವಂತವಾಗುವ ವೈಚಿತ್ರ್ಯ ಅಚ್ಚರಿಗೆ ಕಾರಣವಾಗಿದೆ. ಇದು ಅವನನ್ನು ಪತಿಯಾಗಿ ಪಡೆಯಬಯಸುವ ಎಲ್ಲರಿಗೂ ಸಾಧ್ಯ ಅನ್ನುತ್ತದೆ ಉರಿಲಿಂಗದೇವನ ಈ ವಚನ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...