Home / ಲೇಖನ / ಇತರೆ / ವಚನ ವಿಚಾರ – ಸುಖ ದುಃಖದ ನಕ್ಷತ್ರ

ವಚನ ವಿಚಾರ – ಸುಖ ದುಃಖದ ನಕ್ಷತ್ರ

ಆಕಾಶದಲ್ಲಿ ತಾರೆಗಳು ಕಾಣಬಾರದೆಂಬ ಯೋಚನೆಯುಳ್ಳಡೆ
ಸೂರ್ಯೋದಯಕ್ಕಯ್ಯಾ
ಆಕಾಶದಲ್ಲಿ ತಾರೆಗಳು ಕಾಣಬೇಕೆಂಬ ಯೋಚನೆಯುಳ್ಳಡೆ
ಸೂರ್ಯಾಸ್ತಮಾನಕ್ಕಯ್ಯಾ
ಕಾಣಬಾರದು ಕಾಣಬಾರದು ಜ್ಞಾನದಲ್ಲಿ ಆನಂದ ಅನಾನಂದವ
ಕಾಣಬಹುದು ಕಾಣಬಹುದು ಅಜ್ಞಾನದಲ್ಲಿ
ಸುಖದುಃಖೋಭಯದ್ವಂದ್ವವ
ಭೋ ಭೋ ಕಪಿಲಸಿದ್ಧಮಲ್ಲಿಕಾರ್ಜುನಾ ಭೋ

ಸಿದ್ಧರಾಮನ ವಚನ. ಇದು ನಿತ್ಯಾನುಭವದ ರೂಪಕವೊಂದನ್ನು ಬಳಸಿಕೊಂಡು ಜ್ಞಾನದ ಸ್ವರೂಪವನ್ನು ಹೇಳುತ್ತದೆ.

ನಕ್ಷತ್ರಗಳು ಕಾಣಬಾರದು ಎಂದಿದ್ದರೆ ಸೂರ್ಯ ಹುಟ್ಟುವವರೆಗೆ ಕಾದಿರಬೇಕು, ನಕ್ಷತ್ರಗಳು ಕಾಣಬೇಕೆಂದಿದ್ದರೆ ಸೂರ್ಯಮುಳುಗುವವರೆಗೆ ಕಾದಿರಬೇಕು. ನಕ್ಷತ್ರ ಕಾಣದೆ ಇರುವುದು ಸುಖ, ಕಾಣುವುದು ಕಷ್ಟ ಎಂದು ಬೇಕಾದರೂ ಅರ್ಥಮಾಡಿಕೊಳ್ಳಬಹುದು ಅಥವಾ ಪಲ್ಲಟಗೊಳಿಸಿಯೂ ತಿಳಿಯಬಹುದು. ಏನೇ ಇದ್ದರೂ ಒಂದು ಸುಖ, ಇನ್ನೊಂದು ದುಃಖದ ಸೂಚಕ.

ಒಂದು ಬೇಕು ಇನ್ನೊಂದು ಬೇಡ ಎನ್ನುವುದಾದರೆ ಅದು ಬರುವವರೆಗೆ, ಅಥವ ಹೋಗುವವರೆಗೆ ಕಾದಿರಬೇಕು. ಜ್ಞಾನವೆನ್ನುವುದು ಸುಖವೂ ಅಲ್ಲ ಸುಖವಲ್ಲದ್ದೂ ಅಲ್ಲ. ಅಜ್ಞಾನವಿದ್ದಾಗ ಮಾತ್ರ ಇವೆರಡೂ ಬೇರೆ ಎಂಬ ದ್ವಂದ್ವವಿರುತ್ತದೆ ಎನ್ನುತ್ತದೆ ವಚನ.
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...