Home / ಲೇಖನ / ಇತರೆ / ವಚನ ವಿಚಾರ – ಅರ್ಧ ಮಂಚ

ವಚನ ವಿಚಾರ – ಅರ್ಧ ಮಂಚ

ಆನೆ ಕುದುರೆ ಭಂಡಾರವಿರ್ದಡೇನೋ
ತಾನುಂಬುದು ಪಡಿಯಕ್ಕಿ
ಒಂದಾವಿನ ಹಾಲು
ಮಲಗುವುದರ್ಧ ಮಂಚ
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ
ಒಡಲು ಭೂಮಿಯ ಸಂಗ
ಒಡವೆ ತಾನೇನಪ್ಪುದೋ
ಕೈಹಿಡಿದ ಮಡದಿ ಪರರ ಸಂಗ
ಪ್ರಾಣ ವಾಯುವಿನ ಸಂಗ
ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ
ನಿಃಕಳಂಕ ಮಲ್ಲಿ ಕಾರ್ಜುನಾ

[ಪಡಿ-ಒಂದು ಅಳತೆ, ಒಂದಾವಿನ-ಒಂದು ಹಸುವಿನ]

ಮೋಳಿಗೆ ಮಾರಯ್ಯನ ವಚನ. `ನನ್ನದು’ ಎಂದುಕೊಂಡ ವಸ್ತುಗಳಲ್ಲೇ ಬದುಕಿನ ಸಾರ್ಥಕತೆಯನ್ನು ಕಾಣುವ ಧೋರಣೆ ಸರಿಯಲ್ಲ ಅನ್ನುತ್ತದೆ ಈ ವಚನ. ಆನೆ, ಕುದುರೆ, ಭಂಡಾರ ಅನ್ನುವದರ ಬದಲು ಕಾರು, ಬೈಕು, ಆರಂಕಿಯ ಸಂಬಳ ಎಂದು ಕೊಳ್ಳೋಣ. ಆಗ ನಮ್ಮ ಕಾಲದ ಬಗ್ಗೆ ಕಾಮೆಂಟರಿ ಮಾಡುತ್ತಿರುವಂತೆ ಇದೆ ಅನ್ನಿಸುವುದಿಲ್ಲವೇ? ಅಷ್ಟೆಲ್ಲ ಇದ್ದರೂ ತಿನ್ನುವುದು ಮಾತ್ರ ಒಂದಳತೆ ಅಕ್ಕಿಯ ಅನ್ನ, ಅದೂ ನಮ್ಮ ಹೊಟ್ಟೆ ಹಿಡಿಸುವುವಷ್ಟೇ. ಅರ್ಧಮಂಚ ಅನ್ನುವುದಂತೂ ಅದ್ಭುತವಾದ ರೂಪಕ.

ನನಗೆ ಸುಖಕೊಡುವ ಜೊತೆ ಜೀವಿಯೊಡನೆ ಅರ್ಧ ಮಂಚ ಹಂಚಿಕೊಳ್ಳಬೇಕು. ಇಬ್ಬರೂ ಸ್ವಂತದ ಸುಖವನ್ನೇ ಅಪೇಕ್ಷಿಸುತ್ತಾ ಸುಖ ಸಿಕ್ಕಿದ್ದೂ ಭ್ರಮೆಯೇ ಆಗಬಹುದು. ಹಾಗೆ ಸುಖದ ಸಾಧನ ಅಂದುಕೊಂಡಿರುವ ಮಂಚ ಸಿಕ್ಕಿದ್ದೂ ಅರ್ಧವೇ! ಸುಖಸಾಧನವಾದ ದೇಹ ನನ್ನದು ಅಂದುಕೊಂಡರೆ ಅದೂ ಭೂಮಿಯ ಪಾಲು, ಜೀವಿಸಿದ್ದೇನೆನ್ನುವುದಕ್ಕೆ ಆಡುತ್ತಿರುವ ಉಸಿರು ಕೂಡ ಗಾಳಿಯ ಪಾಲು. ನನ್ನವಳೆಂದುಕೊಂಡ ಹೆಂಡತಿ ನನ್ನ ನಂತರ ಬೇರೆಯವರ ಪಾಲಾಗುವುದಿಲ್ಲವೇ, ಆಗಬಾರದೇ? ಹಾಗಿದ್ದರೆ ನನ್ನ ಜೊತೆಗೆ ಯಾರಿದ್ದಾರೆ, ಏನಿದೆ? ಸಾವು ಒಂದೇ, ಸಂಗಡ ಇರುವವರು ಯಾರೂ ಇಲ್ಲ. ಹತಾಶೆಯೋ, ಅಗಾಧ ಒಂಟಿತನದ ಅನುಭವವೋ, ಇಂಗ್ಲಿಶಿನಲ್ಲಿ ಆಂಗ್ಸ್ಟ್ ಅನ್ನುತ್ತಾರಲ್ಲ ಅದೋ, ಏನಾದರೂ ಕರೆಯಿರಿ. ಕಾಡುವ ಏಕಾಂಗಿತನ ಕೇವಲ ಆಧುನಿಕ ಕಾಲದ್ದೂ ಅಲ್ಲ. ಅದು ಎಲ್ಲ ಕಾಲದ ಮನುಷ್ಯ ಬದುಕಿನ ಸತ್ಯ ಅನ್ನಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...