Home / ಲೇಖನ / ಇತರೆ / ವಚನ ವಿಚಾರ – ಅರ್ಧ ಮಂಚ

ವಚನ ವಿಚಾರ – ಅರ್ಧ ಮಂಚ

ಆನೆ ಕುದುರೆ ಭಂಡಾರವಿರ್ದಡೇನೋ
ತಾನುಂಬುದು ಪಡಿಯಕ್ಕಿ
ಒಂದಾವಿನ ಹಾಲು
ಮಲಗುವುದರ್ಧ ಮಂಚ
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ
ಒಡಲು ಭೂಮಿಯ ಸಂಗ
ಒಡವೆ ತಾನೇನಪ್ಪುದೋ
ಕೈಹಿಡಿದ ಮಡದಿ ಪರರ ಸಂಗ
ಪ್ರಾಣ ವಾಯುವಿನ ಸಂಗ
ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ
ನಿಃಕಳಂಕ ಮಲ್ಲಿ ಕಾರ್ಜುನಾ

[ಪಡಿ-ಒಂದು ಅಳತೆ, ಒಂದಾವಿನ-ಒಂದು ಹಸುವಿನ]

ಮೋಳಿಗೆ ಮಾರಯ್ಯನ ವಚನ. `ನನ್ನದು’ ಎಂದುಕೊಂಡ ವಸ್ತುಗಳಲ್ಲೇ ಬದುಕಿನ ಸಾರ್ಥಕತೆಯನ್ನು ಕಾಣುವ ಧೋರಣೆ ಸರಿಯಲ್ಲ ಅನ್ನುತ್ತದೆ ಈ ವಚನ. ಆನೆ, ಕುದುರೆ, ಭಂಡಾರ ಅನ್ನುವದರ ಬದಲು ಕಾರು, ಬೈಕು, ಆರಂಕಿಯ ಸಂಬಳ ಎಂದು ಕೊಳ್ಳೋಣ. ಆಗ ನಮ್ಮ ಕಾಲದ ಬಗ್ಗೆ ಕಾಮೆಂಟರಿ ಮಾಡುತ್ತಿರುವಂತೆ ಇದೆ ಅನ್ನಿಸುವುದಿಲ್ಲವೇ? ಅಷ್ಟೆಲ್ಲ ಇದ್ದರೂ ತಿನ್ನುವುದು ಮಾತ್ರ ಒಂದಳತೆ ಅಕ್ಕಿಯ ಅನ್ನ, ಅದೂ ನಮ್ಮ ಹೊಟ್ಟೆ ಹಿಡಿಸುವುವಷ್ಟೇ. ಅರ್ಧಮಂಚ ಅನ್ನುವುದಂತೂ ಅದ್ಭುತವಾದ ರೂಪಕ.

ನನಗೆ ಸುಖಕೊಡುವ ಜೊತೆ ಜೀವಿಯೊಡನೆ ಅರ್ಧ ಮಂಚ ಹಂಚಿಕೊಳ್ಳಬೇಕು. ಇಬ್ಬರೂ ಸ್ವಂತದ ಸುಖವನ್ನೇ ಅಪೇಕ್ಷಿಸುತ್ತಾ ಸುಖ ಸಿಕ್ಕಿದ್ದೂ ಭ್ರಮೆಯೇ ಆಗಬಹುದು. ಹಾಗೆ ಸುಖದ ಸಾಧನ ಅಂದುಕೊಂಡಿರುವ ಮಂಚ ಸಿಕ್ಕಿದ್ದೂ ಅರ್ಧವೇ! ಸುಖಸಾಧನವಾದ ದೇಹ ನನ್ನದು ಅಂದುಕೊಂಡರೆ ಅದೂ ಭೂಮಿಯ ಪಾಲು, ಜೀವಿಸಿದ್ದೇನೆನ್ನುವುದಕ್ಕೆ ಆಡುತ್ತಿರುವ ಉಸಿರು ಕೂಡ ಗಾಳಿಯ ಪಾಲು. ನನ್ನವಳೆಂದುಕೊಂಡ ಹೆಂಡತಿ ನನ್ನ ನಂತರ ಬೇರೆಯವರ ಪಾಲಾಗುವುದಿಲ್ಲವೇ, ಆಗಬಾರದೇ? ಹಾಗಿದ್ದರೆ ನನ್ನ ಜೊತೆಗೆ ಯಾರಿದ್ದಾರೆ, ಏನಿದೆ? ಸಾವು ಒಂದೇ, ಸಂಗಡ ಇರುವವರು ಯಾರೂ ಇಲ್ಲ. ಹತಾಶೆಯೋ, ಅಗಾಧ ಒಂಟಿತನದ ಅನುಭವವೋ, ಇಂಗ್ಲಿಶಿನಲ್ಲಿ ಆಂಗ್ಸ್ಟ್ ಅನ್ನುತ್ತಾರಲ್ಲ ಅದೋ, ಏನಾದರೂ ಕರೆಯಿರಿ. ಕಾಡುವ ಏಕಾಂಗಿತನ ಕೇವಲ ಆಧುನಿಕ ಕಾಲದ್ದೂ ಅಲ್ಲ. ಅದು ಎಲ್ಲ ಕಾಲದ ಮನುಷ್ಯ ಬದುಕಿನ ಸತ್ಯ ಅನ್ನಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...