Home / ಲೇಖನ / ಇತರೆ / ವಚನ ವಿಚಾರ – ಸುಮ್ಮನೆ ದುಃಖ

ವಚನ ವಿಚಾರ – ಸುಮ್ಮನೆ ದುಃಖ

ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು
ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು
ಇದಾರಕ್ಕೆ ಆರಕ್ಕೆ
ಇದೇನಕ್ಕೆ ಏನಕ್ಕೆ
ಮಾಯದ ಬೇಳುವೆ ಹುರುಳಿಲ್ಲ
ಕೊಂದು ಕೂಗಿತ್ತು ನೋಡಾ ಗುಹೇಶ್ವರ

[ಆರಕ್ಕೆ-ಬೇಳುವೆ, ಆಶ್ಚರ್ಯ, ಗೊಂದಲ, ಮರುಳು]

ಅಲ್ಲಮನ ವಚನ. ಯಾರಿಗೋ ಸಂಪತ್ತು ಬಂದರೆ ಯಾರೋ ಯಾತಕ್ಕೋ ಚಿಂತಿಸುತ್ತಾರೆ. ಯಾರಿಗೋ ಬಡತನ ಬಂದರೆ ಯಾಕೋ ಸುಮ್ಮನೆ ಮರುಗುತ್ತಾರೆ. ಇದು ಯಾಕೆ, ಇದು ಏಕೆ, ಇದೇ ಮಾಯೆ. ಎಲ್ಲರನ್ನೂ ಕಾಡಿಸುವ ಮಾಯೆ. ಜಗತ್ತಿನ ಅತಿ ಶ್ರೀಮಂತರ ಬಗ್ಗೆ ತಿಳಿಯುವ ಅಸೆ, ಅವರನ್ನು ಕುರಿತು ಕಾಮೆಂಟ್ ಮಾಡುವ ಚಪಲ. ಯಾರಿಗೋ ದುಃಖ ಒದಗಿದರೆ ಅವರಿಗಾಗಿ ಅಯ್ಯೋ ಅನ್ನುತ್ತಿದ್ದೇವೆ ನಾವು ಎಂಬುದು ಎಲ್ಲರಿಗೂ ತಿಳಿಯಲಿ ಎಂಬ ಚಪಲ. ಇತರರ ಶ್ರೀಮಂತಿಕೆ, ಇತರರ ದುಃಖ ಇವುಗಳೇ ನಮ್ಮ ಮನಸ್ಸಿನ ಲೋಕದ ಬಹುಪಾಲು ತುಂಬಿಕೊಂಡಿರುವುದೇ ಒಂದು ವಿಚಿತ್ರ. ಹಾಗಾಗಬಾರದಿತ್ತು ಅಯ್ಯೋ ಅನ್ನುವ ಸಹಾನುಭೂತಿಗೆ ಅರ್ಥವಿಲ್ಲ. ಹಾಗೆಯೇ ಇನ್ನೊಬ್ಬರ ಹಿರಿಮೆ ಕಂಡು ಕೊಂಡಾಡುವುದೋ ಕರುಬುವುದೋ, ಅದಕ್ಕೂ ಅರ್ಥವಿಲ್ಲ. ಆದರೆ ಈ ಅರ್ಥವಿಲ್ಲದ ಚಿಂತೆಗಳೇ ನಮ್ಮನ್ನು ಆಕ್ರಮಿಸಿಕೊಳ್ಳುವುದೇಕೆ?

ಅಲ್ಲಮನಂತೆಯೇ ಬಸವ ಕೂಡ “ನೆರೆಮನೆಯವರ ದುಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮ” ಎಂದಿರುವುದುಂಟು. ನಾವು ಯಾವುದನ್ನು ತೀರ ಸರಳವಾಗಿ ಮರುಕ ಮತ್ತು ಸಂತೋಷ ಅನ್ನುತ್ತೇವೋ ಅವೆಲ್ಲ ಎಷ್ಟು ಅರ್ಥಹೀನ ಅನ್ನುವುದನ್ನು ಈ ವಚನ ಹೇಳುತ್ತಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...