Home / ಲೇಖನ / ಇತರೆ / ವಚನ ವಿಚಾರ – ಸುಮ್ಮನೆ ದುಃಖ

ವಚನ ವಿಚಾರ – ಸುಮ್ಮನೆ ದುಃಖ

ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು
ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು
ಇದಾರಕ್ಕೆ ಆರಕ್ಕೆ
ಇದೇನಕ್ಕೆ ಏನಕ್ಕೆ
ಮಾಯದ ಬೇಳುವೆ ಹುರುಳಿಲ್ಲ
ಕೊಂದು ಕೂಗಿತ್ತು ನೋಡಾ ಗುಹೇಶ್ವರ

[ಆರಕ್ಕೆ-ಬೇಳುವೆ, ಆಶ್ಚರ್ಯ, ಗೊಂದಲ, ಮರುಳು]

ಅಲ್ಲಮನ ವಚನ. ಯಾರಿಗೋ ಸಂಪತ್ತು ಬಂದರೆ ಯಾರೋ ಯಾತಕ್ಕೋ ಚಿಂತಿಸುತ್ತಾರೆ. ಯಾರಿಗೋ ಬಡತನ ಬಂದರೆ ಯಾಕೋ ಸುಮ್ಮನೆ ಮರುಗುತ್ತಾರೆ. ಇದು ಯಾಕೆ, ಇದು ಏಕೆ, ಇದೇ ಮಾಯೆ. ಎಲ್ಲರನ್ನೂ ಕಾಡಿಸುವ ಮಾಯೆ. ಜಗತ್ತಿನ ಅತಿ ಶ್ರೀಮಂತರ ಬಗ್ಗೆ ತಿಳಿಯುವ ಅಸೆ, ಅವರನ್ನು ಕುರಿತು ಕಾಮೆಂಟ್ ಮಾಡುವ ಚಪಲ. ಯಾರಿಗೋ ದುಃಖ ಒದಗಿದರೆ ಅವರಿಗಾಗಿ ಅಯ್ಯೋ ಅನ್ನುತ್ತಿದ್ದೇವೆ ನಾವು ಎಂಬುದು ಎಲ್ಲರಿಗೂ ತಿಳಿಯಲಿ ಎಂಬ ಚಪಲ. ಇತರರ ಶ್ರೀಮಂತಿಕೆ, ಇತರರ ದುಃಖ ಇವುಗಳೇ ನಮ್ಮ ಮನಸ್ಸಿನ ಲೋಕದ ಬಹುಪಾಲು ತುಂಬಿಕೊಂಡಿರುವುದೇ ಒಂದು ವಿಚಿತ್ರ. ಹಾಗಾಗಬಾರದಿತ್ತು ಅಯ್ಯೋ ಅನ್ನುವ ಸಹಾನುಭೂತಿಗೆ ಅರ್ಥವಿಲ್ಲ. ಹಾಗೆಯೇ ಇನ್ನೊಬ್ಬರ ಹಿರಿಮೆ ಕಂಡು ಕೊಂಡಾಡುವುದೋ ಕರುಬುವುದೋ, ಅದಕ್ಕೂ ಅರ್ಥವಿಲ್ಲ. ಆದರೆ ಈ ಅರ್ಥವಿಲ್ಲದ ಚಿಂತೆಗಳೇ ನಮ್ಮನ್ನು ಆಕ್ರಮಿಸಿಕೊಳ್ಳುವುದೇಕೆ?

ಅಲ್ಲಮನಂತೆಯೇ ಬಸವ ಕೂಡ “ನೆರೆಮನೆಯವರ ದುಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮ” ಎಂದಿರುವುದುಂಟು. ನಾವು ಯಾವುದನ್ನು ತೀರ ಸರಳವಾಗಿ ಮರುಕ ಮತ್ತು ಸಂತೋಷ ಅನ್ನುತ್ತೇವೋ ಅವೆಲ್ಲ ಎಷ್ಟು ಅರ್ಥಹೀನ ಅನ್ನುವುದನ್ನು ಈ ವಚನ ಹೇಳುತ್ತಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...