Home / ಲೇಖನ / ಇತರೆ / ವಚನ ವಿಚಾರ – ಸಮತೆ

ವಚನ ವಿಚಾರ – ಸಮತೆ

ಆರೇನೆಂದಡೂ ಓರಂತಿಪ್ಪುದೆ ಸಮತೆ
ಆರು ಜರಿದವರೆನ್ನ ಮನದ ಕಾಳಿಕೆಯ ಕಳೆದರೆಂಬುದೆ ಸಮತೆ
ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ ಹಗೆಗಳೆಂಬುದೆ ಸಮತೆ
ಇಂತಿದು ಗುರುಕಾರುಣ್ಯ
ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ
ಕಪಿಲಸಿದ್ಧಮಲ್ಲಿಕಾರ್ಜುನಾ ನಿನ್ನವರ ನೀನೆಂಬುದೆ ಸಮತೆ.

[ಓರಂತೆ- ಕಾಳಿಕೆ-ಕಲ್ಮಶ, ಸ್ತೌತ್ಯ-ಸ್ತುತಿ, ಅವಿತಥ-ವಂಚನೆ]

ಸಿದ್ಧರಾಮನ ವಚನ. ಯಾರು ಜರಿದರೂ ಅವರು ನನ್ನ ಮನಸ್ಸಿನ ಕಲ್ಮಶ ಕಳೆದರು ಅನ್ನುವುದೇ ಸಮತೆ. ಯಾರಾದರೂ ಹೊಗಳಿದರೆ ಅವರು ನನ್ನ ಜನ್ಮಾಂತರದ ಹಗೆಗಳೆಂದು ತಿಳಿಯುವುದು ಸಮತೆ. ಹೀಗೆ ಇರುವುದು ಗುರುಕರುಣೆಯಿಂದಷ್ಟೆ ಸಾಧ್ಯವಾದೀತು. ನಮ್ಮ ಮನಸ್ಸು, ಮಾತು, ದೇಹದಲ್ಲಿ ಸುಳ್ಳು, ವಂಚನೆ ಇರದಿದ್ದರೆ ದೇವರಿಗೆ ಸೇರಿದವರೆಲ್ಲರನ್ನೂ ದೇವರೆಂದೇ ತಿಳಿಯುವುದು ಸಮತೆ.

ದೇವರು ಎಲ್ಲೆಡೆಯಲ್ಲೂ ಇದ್ದಾನೆ ಎಂಬುದು ಬಲುಮಟ್ಟಿಗೆ ನಾವು ಕಲಿತಮಾತು, ಹೊರತು ನಮ್ಮ ಅನುಭವವಲ್ಲ. ಅದು ಒಂದು ವೇಳೆ ಅನುಭವವೇ ಆದರೆ ಆಗ ನಾನು ಮಾತ್ರವಲ್ಲ ಲೋಕದಲ್ಲಿ ಕಾಣುವುದೆಲ್ಲವೂ ದೇವರೇ ಅನ್ನುವುದು ಅನುಭವವೇ ಆದರೆ ಆಗ ಪ್ರತ್ಯೇಕತೆಗೆ, ಭೇದಭಾವಕ್ಕೆ ಅವಕಾಶವೆಲ್ಲಿ? ಸಿದ್ಧರಾಮನ ಸಮತೆಯ ಕಲ್ಪನೆಯ ಒಂದು ಮುಖ ಇದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...