Home / ಲೇಖನ / ಇತರೆ / ವಚನ ವಿಚಾರ – ಯಾರೂ ಇಲ್ಲವೆಂದು

ವಚನ ವಿಚಾರ – ಯಾರೂ ಇಲ್ಲವೆಂದು

ಆರೂ ಇಲ್ಲವೆಂದು ಆಳಿಗೊಳಲುಬೇಡ ಕಂಡೆಯಾ
ಏನ ಮಾಡಿದಡೂ ಆನಂಜುವಳಲ್ಲ
ತರಗೆಲೆಯ ಮೆಲಿದು ಆನಿಹೆನು
ಸರಿಯ ಮೇಲೊರಗಿ ಆನಿಹೆನು
ಚೆನ್ನಮಲ್ಲಿಕಾರ್ಜುನಯ್ಯಾ
ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು

[ಆರೂ-ಯಾರೂ, ಆಳಿಗೊಳಲುಬೇಡ-ದುಃಖಗೊಳ್ಳಬೇಡ, ಆನಂಜುವಳಲ್ಲ-ನಾನು ಹೆದರುವವಳಲ್ಲ, ಆನಿಹೆನು-ನಾನಿರುವೆನು, ಸರಿ-ಕತ್ತಿಯ ಅಲಗು, ಕರ ಕೇಡು-ಅತಿಯಾದ ಕಷ್ಟ]

ಅಕ್ಕ ಮಹಾದೇವಿಯ ವಚನ. ಈ ವಚನವನ್ನು ಯಾರಿಗೆ ಹೇಳುತ್ತಿರಬಹುದು? ತನಗೆ ತಾನೇ, ಅಥವಾ ತನ್ನನ್ನು ಪರೀಕ್ಷಿಸಲು ಬಯಸಿದ ಮತ್ತೊಬ್ಬರಿಗೆ, ಅಥವ ಚನ್ನಮಲ್ಲಿಕಾರ್ಜುನನಿಗೇ ಹೇಳುತ್ತಿದ್ದಾಳೆಯೋ ಏನೋ. ಮೂರನೆಯ ಸಾಧ್ಯತೆ ಸೂಕ್ತವೆನಿಸುತ್ತದೆ.

ನನಗೆ ಯಾರೂ ಇಲ್ಲ, ಅನಾಥಳು ಎಂದು ನಿರ್ಲಕ್ಷ್ಯ ಮಾಡಬೇಡ, ನಾನು ತರಗೆಲೆಗಳನ್ನು ತಿಂದುಕೊಂಡಿದ್ದೇನೆ. (ಮರದ ಎಲೆಗಳನ್ನೇ ತಿಂದುಕೊಂಡು ತಪಸ್ಸು ಮಾಡುವ ಕ್ರಮವೂ ಇತ್ತೆಂದು ತೋರುತ್ತದೆ. ಗಿರಿಜೆಯು ಶಿವನ ಕುರಿತು ತಪಸ್ಸು ಮಾಡಿದಾಗ ಕೆಲವು ಕಾಲ ಎಲೆಗಳನ್ನೇ ತಿಂದು ಇದ್ದಳೆಂಬ ಕಥೆ ಇದೆ). ಚೂಪಾದ ಕತ್ತಿಯ ಮೇಲೆ ಒರಗಿದ್ದೇನೆ. ಚನ್ನಮಲ್ಲಿಕಾರ್ಜುನನನ್ನು ಬಯಸಿ ನನಗೆ ನಾನೇ ಹೀಗೆ ದಂಡನೆ ಕೊಟ್ಟುಕೊಳ್ಳುತ್ತಿರುವಾಗ ಇನ್ನೇನು ಆಗಲು ಸಾಧ್ಯ. ಚನ್ನಮಲ್ಲಿಕಾರ್ಜುನ ಇನ್ನೂ ಅತಿ ಕೆಡುಕನ್ನೇನಾದರೂ ಒಡ್ಡಿದರೆ ದೇಹ, ಪ್ರಾಣ ಎರಡನ್ನೂ ಅವನಿಗೇ ಅರ್ಪಿಸಿಬಿಡುತ್ತೇನೆ.

ನನಗೆ ಇರುವುದು ಚೆನ್ನಮಲ್ಲಿಕಾರ್ಜುನ ಮಾತ್ರ ಅವನೇ ನನನ್ನು ಯಾರೂ ಇಲ್ಲವೆಂದು ನಿರ್ಲಕ್ಷ್ಯ ಮಾಡಿದರೆ ಅದೇ ಪರಮ ಕೇಡು. ಹಾಗೆ ಮಾಡಿಯಾನೇ ಎಂಬ ಆತಂಕದ ದನಿಯೂ ಇಲ್ಲಿ ಕೇಳುವುದೇ? ಹಾಗಾಗುವುದಾದರೆ ಪ್ರಾಣ, ದೇಹ ಎರಡೂ ಅವನಿಗೇ ಅರ್ಪಣೆಯಾಗಲಿ ಅನ್ನುವಾಗ ಹತಾಶೆ ಇದೆಯೋ, ಗಟ್ಟಿ ಮನಸ್ಸು ಇದೆಯೋ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...