Home / ಲೇಖನ / ಇತರೆ / ವಚನ ವಿಚಾರ – ಯಾರೂ ಇಲ್ಲವೆಂದು

ವಚನ ವಿಚಾರ – ಯಾರೂ ಇಲ್ಲವೆಂದು

ಆರೂ ಇಲ್ಲವೆಂದು ಆಳಿಗೊಳಲುಬೇಡ ಕಂಡೆಯಾ
ಏನ ಮಾಡಿದಡೂ ಆನಂಜುವಳಲ್ಲ
ತರಗೆಲೆಯ ಮೆಲಿದು ಆನಿಹೆನು
ಸರಿಯ ಮೇಲೊರಗಿ ಆನಿಹೆನು
ಚೆನ್ನಮಲ್ಲಿಕಾರ್ಜುನಯ್ಯಾ
ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು

[ಆರೂ-ಯಾರೂ, ಆಳಿಗೊಳಲುಬೇಡ-ದುಃಖಗೊಳ್ಳಬೇಡ, ಆನಂಜುವಳಲ್ಲ-ನಾನು ಹೆದರುವವಳಲ್ಲ, ಆನಿಹೆನು-ನಾನಿರುವೆನು, ಸರಿ-ಕತ್ತಿಯ ಅಲಗು, ಕರ ಕೇಡು-ಅತಿಯಾದ ಕಷ್ಟ]

ಅಕ್ಕ ಮಹಾದೇವಿಯ ವಚನ. ಈ ವಚನವನ್ನು ಯಾರಿಗೆ ಹೇಳುತ್ತಿರಬಹುದು? ತನಗೆ ತಾನೇ, ಅಥವಾ ತನ್ನನ್ನು ಪರೀಕ್ಷಿಸಲು ಬಯಸಿದ ಮತ್ತೊಬ್ಬರಿಗೆ, ಅಥವ ಚನ್ನಮಲ್ಲಿಕಾರ್ಜುನನಿಗೇ ಹೇಳುತ್ತಿದ್ದಾಳೆಯೋ ಏನೋ. ಮೂರನೆಯ ಸಾಧ್ಯತೆ ಸೂಕ್ತವೆನಿಸುತ್ತದೆ.

ನನಗೆ ಯಾರೂ ಇಲ್ಲ, ಅನಾಥಳು ಎಂದು ನಿರ್ಲಕ್ಷ್ಯ ಮಾಡಬೇಡ, ನಾನು ತರಗೆಲೆಗಳನ್ನು ತಿಂದುಕೊಂಡಿದ್ದೇನೆ. (ಮರದ ಎಲೆಗಳನ್ನೇ ತಿಂದುಕೊಂಡು ತಪಸ್ಸು ಮಾಡುವ ಕ್ರಮವೂ ಇತ್ತೆಂದು ತೋರುತ್ತದೆ. ಗಿರಿಜೆಯು ಶಿವನ ಕುರಿತು ತಪಸ್ಸು ಮಾಡಿದಾಗ ಕೆಲವು ಕಾಲ ಎಲೆಗಳನ್ನೇ ತಿಂದು ಇದ್ದಳೆಂಬ ಕಥೆ ಇದೆ). ಚೂಪಾದ ಕತ್ತಿಯ ಮೇಲೆ ಒರಗಿದ್ದೇನೆ. ಚನ್ನಮಲ್ಲಿಕಾರ್ಜುನನನ್ನು ಬಯಸಿ ನನಗೆ ನಾನೇ ಹೀಗೆ ದಂಡನೆ ಕೊಟ್ಟುಕೊಳ್ಳುತ್ತಿರುವಾಗ ಇನ್ನೇನು ಆಗಲು ಸಾಧ್ಯ. ಚನ್ನಮಲ್ಲಿಕಾರ್ಜುನ ಇನ್ನೂ ಅತಿ ಕೆಡುಕನ್ನೇನಾದರೂ ಒಡ್ಡಿದರೆ ದೇಹ, ಪ್ರಾಣ ಎರಡನ್ನೂ ಅವನಿಗೇ ಅರ್ಪಿಸಿಬಿಡುತ್ತೇನೆ.

ನನಗೆ ಇರುವುದು ಚೆನ್ನಮಲ್ಲಿಕಾರ್ಜುನ ಮಾತ್ರ ಅವನೇ ನನನ್ನು ಯಾರೂ ಇಲ್ಲವೆಂದು ನಿರ್ಲಕ್ಷ್ಯ ಮಾಡಿದರೆ ಅದೇ ಪರಮ ಕೇಡು. ಹಾಗೆ ಮಾಡಿಯಾನೇ ಎಂಬ ಆತಂಕದ ದನಿಯೂ ಇಲ್ಲಿ ಕೇಳುವುದೇ? ಹಾಗಾಗುವುದಾದರೆ ಪ್ರಾಣ, ದೇಹ ಎರಡೂ ಅವನಿಗೇ ಅರ್ಪಣೆಯಾಗಲಿ ಅನ್ನುವಾಗ ಹತಾಶೆ ಇದೆಯೋ, ಗಟ್ಟಿ ಮನಸ್ಸು ಇದೆಯೋ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...