Home / ಲೇಖನ / ಇತರೆ / ವಚನ ವಿಚಾರ – ಯಾರೂ ಇಲ್ಲವೆಂದು

ವಚನ ವಿಚಾರ – ಯಾರೂ ಇಲ್ಲವೆಂದು

ಆರೂ ಇಲ್ಲವೆಂದು ಆಳಿಗೊಳಲುಬೇಡ ಕಂಡೆಯಾ
ಏನ ಮಾಡಿದಡೂ ಆನಂಜುವಳಲ್ಲ
ತರಗೆಲೆಯ ಮೆಲಿದು ಆನಿಹೆನು
ಸರಿಯ ಮೇಲೊರಗಿ ಆನಿಹೆನು
ಚೆನ್ನಮಲ್ಲಿಕಾರ್ಜುನಯ್ಯಾ
ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು

[ಆರೂ-ಯಾರೂ, ಆಳಿಗೊಳಲುಬೇಡ-ದುಃಖಗೊಳ್ಳಬೇಡ, ಆನಂಜುವಳಲ್ಲ-ನಾನು ಹೆದರುವವಳಲ್ಲ, ಆನಿಹೆನು-ನಾನಿರುವೆನು, ಸರಿ-ಕತ್ತಿಯ ಅಲಗು, ಕರ ಕೇಡು-ಅತಿಯಾದ ಕಷ್ಟ]

ಅಕ್ಕ ಮಹಾದೇವಿಯ ವಚನ. ಈ ವಚನವನ್ನು ಯಾರಿಗೆ ಹೇಳುತ್ತಿರಬಹುದು? ತನಗೆ ತಾನೇ, ಅಥವಾ ತನ್ನನ್ನು ಪರೀಕ್ಷಿಸಲು ಬಯಸಿದ ಮತ್ತೊಬ್ಬರಿಗೆ, ಅಥವ ಚನ್ನಮಲ್ಲಿಕಾರ್ಜುನನಿಗೇ ಹೇಳುತ್ತಿದ್ದಾಳೆಯೋ ಏನೋ. ಮೂರನೆಯ ಸಾಧ್ಯತೆ ಸೂಕ್ತವೆನಿಸುತ್ತದೆ.

ನನಗೆ ಯಾರೂ ಇಲ್ಲ, ಅನಾಥಳು ಎಂದು ನಿರ್ಲಕ್ಷ್ಯ ಮಾಡಬೇಡ, ನಾನು ತರಗೆಲೆಗಳನ್ನು ತಿಂದುಕೊಂಡಿದ್ದೇನೆ. (ಮರದ ಎಲೆಗಳನ್ನೇ ತಿಂದುಕೊಂಡು ತಪಸ್ಸು ಮಾಡುವ ಕ್ರಮವೂ ಇತ್ತೆಂದು ತೋರುತ್ತದೆ. ಗಿರಿಜೆಯು ಶಿವನ ಕುರಿತು ತಪಸ್ಸು ಮಾಡಿದಾಗ ಕೆಲವು ಕಾಲ ಎಲೆಗಳನ್ನೇ ತಿಂದು ಇದ್ದಳೆಂಬ ಕಥೆ ಇದೆ). ಚೂಪಾದ ಕತ್ತಿಯ ಮೇಲೆ ಒರಗಿದ್ದೇನೆ. ಚನ್ನಮಲ್ಲಿಕಾರ್ಜುನನನ್ನು ಬಯಸಿ ನನಗೆ ನಾನೇ ಹೀಗೆ ದಂಡನೆ ಕೊಟ್ಟುಕೊಳ್ಳುತ್ತಿರುವಾಗ ಇನ್ನೇನು ಆಗಲು ಸಾಧ್ಯ. ಚನ್ನಮಲ್ಲಿಕಾರ್ಜುನ ಇನ್ನೂ ಅತಿ ಕೆಡುಕನ್ನೇನಾದರೂ ಒಡ್ಡಿದರೆ ದೇಹ, ಪ್ರಾಣ ಎರಡನ್ನೂ ಅವನಿಗೇ ಅರ್ಪಿಸಿಬಿಡುತ್ತೇನೆ.

ನನಗೆ ಇರುವುದು ಚೆನ್ನಮಲ್ಲಿಕಾರ್ಜುನ ಮಾತ್ರ ಅವನೇ ನನನ್ನು ಯಾರೂ ಇಲ್ಲವೆಂದು ನಿರ್ಲಕ್ಷ್ಯ ಮಾಡಿದರೆ ಅದೇ ಪರಮ ಕೇಡು. ಹಾಗೆ ಮಾಡಿಯಾನೇ ಎಂಬ ಆತಂಕದ ದನಿಯೂ ಇಲ್ಲಿ ಕೇಳುವುದೇ? ಹಾಗಾಗುವುದಾದರೆ ಪ್ರಾಣ, ದೇಹ ಎರಡೂ ಅವನಿಗೇ ಅರ್ಪಣೆಯಾಗಲಿ ಅನ್ನುವಾಗ ಹತಾಶೆ ಇದೆಯೋ, ಗಟ್ಟಿ ಮನಸ್ಸು ಇದೆಯೋ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...