Home / ಲೇಖನ / ಇತರೆ / ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...