Home / ಲೇಖನ / ಇತರೆ / ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...