Home / ಲೇಖನ / ಇತರೆ / ವಚನ ವಿಚಾರ – ಆಸೆ ರೋಷ

ವಚನ ವಿಚಾರ – ಆಸೆ ರೋಷ

ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು
ನೋಡಾ
ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ
ಆತನೆ ಲಿಂಗೈಕ್ಯನು
ಗೊಹೇಶ್ವರ

ಅಲ್ಲಮನ ವಚನ. ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೋದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ ಮತ್ತು ರೋಷಗಳೆರಡೂ ನಮ್ಮ ಅಹಂಕಾರವನ್ನು ಗಟ್ಟಿಗೊಳಿಸುವ ಗುಣಗಳು.

ನಮ್ಮ ಎಲ್ಲ ಕೋಪಕ್ಕೆ ನಮ್ಮೊಳಗಿನ ಆಸೆಯೇ ಕಾರಣವಲ್ಲವೆ? ನಮ್ಮೊಳಗೆ ನಾವು ಬೆಳೆಸಿಕೊಂಡ ಆಸೆಗೆ ಧಕ್ಕೆ ಬಂದಾಗ ಕೋಪ, ರೋಷಗಳು ಮೂಡುತ್ತವೆ. ಹಾಗೆ ಹುಟ್ಟಿದ ರೋಷ ಅತೃಪ್ತವಾದ ಆಸೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆಸೆಯಿಂದ ಕೋಪ, ಕೋಪದಿಂದ ಆಸೆ ಪರಸ್ಪರ ಬೆಳೆಯುತ್ತ ಹೋಗುತ್ತವೆ.

ದೇವರನ್ನು ನಮ್ಮಿಂದ ಬೇರೆಯಾದ ಒಂದು ಶಕ್ತಿ ಎಂದು ಸಾಮಾನ್ಯವಾಗಿ ತಿಳಿಯುತ್ತೇವೆ. ಹಾಗೆ ನಾವು ಬೇರೆ ಎಂಬ ಪ್ರತ್ಯೇಕತೆಯ ಭಾವ ಇರುವುದರಿಂದಲೇ ನನಗೆ ಅದು “ಬೇಕು” ಎಂಬ ಆಸೆ ಮತ್ತು ಸಿಗಲಿಲ್ಲವೆಂಬ ರೋಷ ಹುಟ್ಟುತ್ತವೆ. ಆಸೆ ರೋಷಗಳಿಂದ ನಾವು ನಮ್ಮ ಸುತ್ತಲವರಿಂದಲೂ ನಮ್ಮ ಕಲ್ಪನೆಯ ದೇವರಿಂದಲೂ ಬೇರೆಯಾಗುತ್ತ ದೂರವಾಗುತ್ತ ಹೋಗುತ್ತೇವೆ.

ಆಸೆಬುರುಕರನ್ನೂ ಕೋಪಿಷ್ಠರನ್ನೂ ನಾವು ದೂರವಿಡಲು ಬಯಸುವುದಿಲ್ಲವೇ? ಹಾಗೆಯೇ ದೇವರು ಕೂಡ ಆಸೆ ರೋಷಗಳು ಇರುವ ವ್ಯಕ್ತಿಗಳನ್ನು ದೂರವಿಡುತ್ತಾನೆ. ಆಸೆ ರೋಷಗಳನ್ನು ನೀಗಿಕೊಂಡಾಗ ವಿಶ್ವದ ಶಕ್ತಿಯೊಡನೆ ಐಕ್ಯ ಸಾಧ್ಯವಾಗುತ್ತದೆ ಎಂಬುದು ಅಲ್ಲಮನ ಮಾತು. ದೇವರನ್ನು ನಿರ್ಗುಣ ಅನ್ನುವುದುಂಟಲ್ಲವೆ? ಯಾಕೆಂದರೆ ದೇವರಿಗೆ ಆಸೆಯೂ ಇರಲಾರದು, ರೋಷವೂ ಇರಲಾರದು. ಇವೆರಡೂ ಗುಣಗಳನ್ನು ಇಲ್ಲವಾಗಿಸಿಕೊಂಡು ನಮ್ಮನ್ನು ನಾವು ಮಗುಗೊಳಿಸಿ ಕೊಂಡರೆ ಅದೇ ದೈವತ್ವ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...