Home / ಲೇಖನ / ಇತರೆ / ವಚನ ವಿಚಾರ – ಆಸೆ ರೋಷ

ವಚನ ವಿಚಾರ – ಆಸೆ ರೋಷ

ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು
ನೋಡಾ
ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ
ಆತನೆ ಲಿಂಗೈಕ್ಯನು
ಗೊಹೇಶ್ವರ

ಅಲ್ಲಮನ ವಚನ. ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೋದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ ಮತ್ತು ರೋಷಗಳೆರಡೂ ನಮ್ಮ ಅಹಂಕಾರವನ್ನು ಗಟ್ಟಿಗೊಳಿಸುವ ಗುಣಗಳು.

ನಮ್ಮ ಎಲ್ಲ ಕೋಪಕ್ಕೆ ನಮ್ಮೊಳಗಿನ ಆಸೆಯೇ ಕಾರಣವಲ್ಲವೆ? ನಮ್ಮೊಳಗೆ ನಾವು ಬೆಳೆಸಿಕೊಂಡ ಆಸೆಗೆ ಧಕ್ಕೆ ಬಂದಾಗ ಕೋಪ, ರೋಷಗಳು ಮೂಡುತ್ತವೆ. ಹಾಗೆ ಹುಟ್ಟಿದ ರೋಷ ಅತೃಪ್ತವಾದ ಆಸೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆಸೆಯಿಂದ ಕೋಪ, ಕೋಪದಿಂದ ಆಸೆ ಪರಸ್ಪರ ಬೆಳೆಯುತ್ತ ಹೋಗುತ್ತವೆ.

ದೇವರನ್ನು ನಮ್ಮಿಂದ ಬೇರೆಯಾದ ಒಂದು ಶಕ್ತಿ ಎಂದು ಸಾಮಾನ್ಯವಾಗಿ ತಿಳಿಯುತ್ತೇವೆ. ಹಾಗೆ ನಾವು ಬೇರೆ ಎಂಬ ಪ್ರತ್ಯೇಕತೆಯ ಭಾವ ಇರುವುದರಿಂದಲೇ ನನಗೆ ಅದು “ಬೇಕು” ಎಂಬ ಆಸೆ ಮತ್ತು ಸಿಗಲಿಲ್ಲವೆಂಬ ರೋಷ ಹುಟ್ಟುತ್ತವೆ. ಆಸೆ ರೋಷಗಳಿಂದ ನಾವು ನಮ್ಮ ಸುತ್ತಲವರಿಂದಲೂ ನಮ್ಮ ಕಲ್ಪನೆಯ ದೇವರಿಂದಲೂ ಬೇರೆಯಾಗುತ್ತ ದೂರವಾಗುತ್ತ ಹೋಗುತ್ತೇವೆ.

ಆಸೆಬುರುಕರನ್ನೂ ಕೋಪಿಷ್ಠರನ್ನೂ ನಾವು ದೂರವಿಡಲು ಬಯಸುವುದಿಲ್ಲವೇ? ಹಾಗೆಯೇ ದೇವರು ಕೂಡ ಆಸೆ ರೋಷಗಳು ಇರುವ ವ್ಯಕ್ತಿಗಳನ್ನು ದೂರವಿಡುತ್ತಾನೆ. ಆಸೆ ರೋಷಗಳನ್ನು ನೀಗಿಕೊಂಡಾಗ ವಿಶ್ವದ ಶಕ್ತಿಯೊಡನೆ ಐಕ್ಯ ಸಾಧ್ಯವಾಗುತ್ತದೆ ಎಂಬುದು ಅಲ್ಲಮನ ಮಾತು. ದೇವರನ್ನು ನಿರ್ಗುಣ ಅನ್ನುವುದುಂಟಲ್ಲವೆ? ಯಾಕೆಂದರೆ ದೇವರಿಗೆ ಆಸೆಯೂ ಇರಲಾರದು, ರೋಷವೂ ಇರಲಾರದು. ಇವೆರಡೂ ಗುಣಗಳನ್ನು ಇಲ್ಲವಾಗಿಸಿಕೊಂಡು ನಮ್ಮನ್ನು ನಾವು ಮಗುಗೊಳಿಸಿ ಕೊಂಡರೆ ಅದೇ ದೈವತ್ವ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...