Home / ಲೇಖನ / ಇತರೆ / ವಚನ ವಿಚಾರ – ಪುರುಷತ್ವ

ವಚನ ವಿಚಾರ – ಪುರುಷತ್ವ

ಆಳುತನದ ಮಾತನೇರಿಸಿ ನುಡಿದಡೆ
ಆಗಳೆ ಕಟ್ಟಿದೆನು ಗಂಡುಗಚ್ಚೆಯ
ತಿಗುರನೇರಿಸಿ ತಿಲಕವನಿಟ್ಟು
ಕೈದುವ ಕೊಂಡು ಕಳನೇರಿದ ಬಳಿಕ
ಕಟ್ಟಿದ ನಿರಿ ಸಡಿಲಿಸಿದಡೆ ಇನ್ನು ನಿಮ್ಮಾಣೆ
ಕಾಣಾ ಚೆನ್ನಮಲ್ಲಿಕಾರ್ಜುನಾ

[ತಿಗುರನೇರಿಸಿ-ಪರಿಮಳ ಲೇಪಿಸಿ, ಕೈದುವ-ಆಯುಧವ, ಕಳ-ಅಖಾಡ]

ಅಕ್ಕ ಮಹಾದೇವಿಯ ವಚನ. ಇಲ್ಲಿ ಆಕೆ ತನ್ನ ಮೇಲೆ ಪುರುಷತ್ವವನ್ನು ಆರೋಪಿಸಿಕೊಂಡಿದ್ದಾಳೆ. ನನ್ನ ಸಾಮರ್ಥ್ಯದ ಬಗ್ಗೆ ಪ್ರಶ್ನಿಸಿದರೆ ಇಗೋ ಗಂಡುಗಚ್ಚೆ ತೊಟ್ಟು, ತಿಗುರನ್ನೇರಿಸಿ(ಪರಿಮಳ? ತಿಲಕ?), ಕೈಯಲ್ಲಿ ಆಯುಧಹಿಡಿದು, ಅಖಾಡ (ಕಳ)ಕ್ಕೆ ಏರಿದೆ, ಇನ್ನು ಕಟ್ಟಿದ ನಿರಿಗೆ ಸಡಲಿಸಿದರೆ ನಿಮ್ಮಾಣೆ ಅನ್ನುತ್ತಾಳೆ.

ಆಧ್ಯಾತ್ಮ ಸಾಧನೆ ಕೇವಲ ಪುರುಷರಿಗೆ ಮಾತ್ರ ಮೀಸಲಾದದ್ದು ಅನ್ನುವ ಧೋರಣೆಗೆ ಪ್ರತಿಕ್ರಿಯೆಯಾಗಿ ಹೀಗೆ ಹೇಳುತ್ತಿದ್ದಾಳೋ ಅಥವಾ ವಚನಗಳಲ್ಲಿ ಸಾಮಾನ್ಯವಾಗಿರುವಂತೆ ಆಧ್ಯಾತ್ಮದ ಸಾಧನೆಯನ್ನು ಪುರುಷರ ದೈವಿಕ ಸಾಮರ್ಥ್ಯ, ಬೇಟೆ, ಹಿಂಸೆಗಳ ಪರಿಭಾಷೆಯನ್ನು ಬಳಸುತ್ತಿದ್ದಾಳೆಯೋ? ಅದು ಹೇಗೇ ಇದ್ದರೂ ಸ್ತ್ರೀ ಸಂವೇದನೆಯ ಉತ್ತುಂಗವೆಂದು ಭಾವಿಸಿರುವ ಅಕ್ಕ ಪುರುಷತ್ವದ ಆರೋಪಣೆಯನ್ನು ಮಾಡಿಕೊಳ್ಳುವುದೂ ಗಜೇಶ ಮಸಣಯ್ಯ, ಉರಿಲಿಂಗದೇವ ತಮ್ಮ ಮೇಲೆ ಸ್ತ್ರೀತ್ವವನ್ನು ಆರೋಪಿಸಿ ಕೊಳ್ಳುವುದೂ ಗಮನಾರ್ಹ.
*****

Tagged:

Leave a Reply

Your email address will not be published. Required fields are marked *

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...